News Karnataka Kannada
Monday, May 06 2024
ಮಂಗಳೂರು

ಮದರ್‌ ತೆರೇಸಾರವರ 25ನೇ ಸಂಸ್ಮರಣಾ ದಿನಾಚರಣೆ: ಜಿಲ್ಲಾ ಮಟ್ಟದ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆ 

Dakshina Kannada district level essay and painting competition to mark 25th death anniversary of Mother Teresa
Photo Credit : Freepik
ಮಂಗಳೂರು : ಮಾನವೀಯತೆಯ ಪ್ರತಿರೂಪ ಸಂತ ಮದರ್ ತೆರೇಸಾರವರ 25ನೇ ಸಂಸ್ಮರಣಾ ದಿನಾಚರಣೆಯ ಅಂಗವಾಗಿ ತಾ.20-07-2022 ರಂದು ಶನಿವಾರ ಬೆಳಿಗ್ಗೆ 9.30ಕ್ಕೆ ನಗರದ ಮಿಲಾಗ್ರಿಸ್ ಕಾಲೇಜ್ ನಲ್ಲಿ ದ.ಕ.ಜಿಲ್ಲಾ ಮಟ್ಟದ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಸಂತ ಮದರ್ ತೆರೇಸಾ ವಿಚಾರ ವೇದಿಕೆ ಮಂಗಳೂರು ಪತ್ರಿಕಾಹೇಳಿಕೆಯೊಂದರಲ್ಲಿ ತಿಳಿಸಿದೆ.
‘ಸಹಾನುಭೂತಿ ಮತ್ತು ಆಧ್ಯಾತ್ಮಿಕತೆ’ ಎಂಬ ವಿಷಯದ ಮೇಲೆ ನಡೆಯುವ ಚಿತ್ರಕಲಾ ಸ್ಪರ್ಧೆಯನ್ನು ಹೈಸ್ಕೂಲ್, ಕಾಲೇಜ್ ಹಾಗೂ ಸಾರ್ವಜನಿಕ ವಿಭಾಗದಲ್ಲಿ ನಡೆಸಲಾಗುತ್ತದೆ. ಪ್ರಬಂಧ ಸ್ಪರ್ಧೆಯನ್ನು ಹೈಸ್ಕೂಲ್, ಕಾಲೇಜ್, ಸಾರ್ವಜನಿಕ ವಿಭಾಗದಲ್ಲಿ ನಡೆಸಲಾಗುತ್ತಿದ್ದು, ‘ಪ್ರಾರ್ಥನೆ ಮಾಡುವ ತುಟಿಗಳಿಗಿಂತ ಇತರರಿಗೆ ಸಹಾಯ ಮಾಡುವ ಕೈಗಳೇ ಲೇಸು’ – ಮದರ್ ತೆರೇಸಾ ಎಂಬ ವಿಷಯವನ್ನು ಹೈಸ್ಕೂಲ್ ವಿಭಾಗಕ್ಕೂ, ‘ಕೋವಿಡ್ 19ರ ಕಾಲದಲ್ಲಿ ಮದರ್ ತೆರೇಸಾ ನೆನಪುಗಳು’ ಎಂಬ ವಿಷಯವನ್ನು ಕಾಲೇಜ್ ವಿಭಾಗಕ್ಕೂ ಹಾಗೂ ‘ವೈವಿಧ್ಯ ಭಾರತದಲ್ಲಿ ಮಾನವೀಯ ಸೇವೆಗಳು’ ಎಂಬ ವಿಷಯವನ್ನು ಸಾರ್ವಜನಿಕ ವಿಭಾಗಕ್ಕೂ ನೀಡಲಾಗಿದೆ.
ಭಾಗವಹಿಸುವ ಎಲ್ಲಾ ಸ್ಪರ್ಧಾಳುಗಳು ಅಂದು ಬೆಳಿಗ್ಗೆ 9.30ಕ್ಕೆ ನಿಗದಿತ ಸ್ಥಳದಲ್ಲಿ ಹಾಜರಿರಬೇಕು.ವಿದ್ಯಾರ್ಥಿಗಳು ತಮ್ಮ ಶಾಲಾ ಕಾಲೇಜಿನ ಗುರುತುಚೀಟಿ ಹಾಗೂ ಶಾಲಾ ಕಾಲೇಜು ಮುಖ್ಯಸ್ಥರಿಂದ ಅನುಮತಿ ಪತ್ರವನ್ನು ತರತಕ್ಕದ್ದು.ಸಾರ್ವಜನಿಕ ವಿಭಾಗದಲ್ಲಿ ಭಾಗವಹಿಸುವ ಸ್ಪರ್ಧಾಳುಗಳು ತಮ್ಮ ಆಧಾರ್ ಕಾರ್ಡ್ ನ್ನು ತರತಕ್ಕದ್ದು.
ಹೆಚ್ಚಿನ ಮಾಹಿತಿಗಾಗಿ 9611876693, 9448503739, 9845084707 ನಂಬರಿಗೆ ಸಂಪರ್ಕಿಸಬೇಕೆಂದು ವಿಚಾರ ವೇದಿಕೆಯ ಮಾಧ್ಯಮ ಸಮಿತಿ ಸಂಚಾಲಕರಾದ ಸುಶೀಲ್ ನೊರೋನ್ಹಾರವರು ಪತ್ರಿಕಾಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
15229
Jaya Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು