News Karnataka Kannada
Monday, April 29 2024
ಮಂಗಳೂರು

ದಕ್ಷಿಣ ಕನ್ನಡ: ಮಸೂದ್ ಕೊಲೆ ಆರೋಪಿಗಳಿಗೆ ನ್ಯಾಯಾಂಗ ಕಸ್ಟಡಿ ವಿಸ್ತರಣೆ

Dakshina Kannada: Judicial custody extended to Masood's murder accused
Photo Credit : News Kannada

ದಕ್ಷಿಣ ಕನ್ನಡ: ಗುಂಪು ಹಲ್ಲೆಗೊಳಗಾಗಿ ಸಾವಿಗೀಡಾದ ಕಳಂಜದ ಮಸೂದ್ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿ ನ್ಯಾಯಾಂಗ ಕಸ್ಟಡಿಯಲ್ಲಿದ್ದ ಎಲ್ಲಾ ಆರೋಪಿ ಗಳಿಗೆ ನ್ಯಾಯಾಂಗ ಕಸ್ಟಡಿ ವಿಸ್ತರಿಸಲಾಗಿದೆ.

ಮಸೂದ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ, ಅಭಿಲಾಶ್, ಸುನಿಲ್ ಕೆ, ಸುಧೀರ್, ಶಿವಪ್ರಸಾದ್, ರಂಜಿತ್ ಬಿ, ಸದಾಶಿವ ಪೂಜಾರಿ, ರಂಜಿತ್, ಭಾಸ್ಕರ ಕೆ ಎಂ ಇವರ ಮೇಲೆ ಕೊಲೆ ಪ್ರಕರಣ ದಾಖಲಾಗಿದ್ದು, ಬಂಧಿತರಾದ ಆರೋಪಿಗಳು ನ್ಯಾಯಾಂಗ ಕಸ್ಟಡಿಯಲ್ಲಿದ್ದರು.

ಇಂದು ನ್ಯಾಯಾಂಗ ಕಸ್ಟಡಿಯ ಅವಧಿ ಪೂರ್ಣ ಗೊಂಡ ಹಿನ್ನಲೆಯಲ್ಲಿ ಮತ್ತೆ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ನ್ಯಾಯಾಂಗ ಬಂಧನವನ್ನು ಆಗಸ್ಟ್ 29 ರವರೆಗೆ ವಿಸ್ತರಿಸಿ ನ್ಯಾಯಾಧೀಶರು ಆದೇಶಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು