Categories: ಮಂಗಳೂರು

ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರ: ಮಾಸ್ಟರಿಂಗ್ ಕಾರ್ಯ ಆರಂಭ

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯ 8 ಕಡೆಗಳಲ್ಲಿ ಮಾಸ್ಟರಿಂಗ್ ಕಾರ್ಯ ಆರಂಭವಾಗಿದೆ.

ಜಿಲ್ಲೆಯಲ್ಲಿ 18,18,127 ಮತದಾರರಿದ್ದಾರೆ. ಒಟ್ಟು 1876 ಮತಗಟ್ಟೆ ಇರಲಿದೆ. 171 ಅತೀ ಸೂಕ್ಷ್ಮ ಮತಗಟ್ಟೆಗಳು ಹಾಗು 1705 ಸಾಮಾನ್ಯ ಮತಗಟ್ಟೆ ಇರಲಿದ್ದು, ಮತಗಟ್ಟೆಗಳಿಗೆ 11255 ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ.

ಇನ್ನು ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 1500 ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ 1600 ಪೊಲೀಸರ ನಿಯೋಜನೆ ಮಾಡಲಾಗಿದೆ. ಸದ್ಯ ಮತಗಟ್ಟೆಗಳಿಗೆ ತೆರಳಿರುವ ಸಿಬ್ಬಂದಿಗಳಿಗೆ ಅಧಿಕಾರಿಗಳು ನಿರ್ದೇಶನಗಳನ್ನ ನೀಡುತ್ತಿದ್ದಾರೆ. ಇನ್ನೇನು ಕೆಲವೇ ಹೊತ್ತುಗಳಲ್ಲಿ ಮತಪೆಟ್ಟಿಗೆ ಯೊಂದಿಗೆ ಮತಗಟ್ಟೆಗಳಿಗೆ ಅಧಿಕಾರಿಗಳು ತೆರಳಲಿದ್ದಾರೆ.

ಮತದಾರರ ವಿವರ: ಒಟ್ಟು ಮತದಾರರ ಸಂಖ್ಯೆ- 18,18,127, ಪುರುಷರು- 8,87,122, ಮಹಿಳೆಯರು- 9,30,928. ತೃತೀಯ ಲಿಂಗಿಗಳು- 77

ಮತಗಟ್ಟೆ ವಿವರ: ಒಟ್ಟು ಮತಗಟ್ಟೆ- 1,876, ಅತಿ ಸೂಕ್ಷ್ಮ ಮತಗಟ್ಟೆ- 171. ಸಾಮಾನ್ಯ ಮತಗಟ್ಟೆ- 1705

ಭದ್ರತೆಗೆ ನಿಯೋಜನೆಗೊಂಡಿರುವ ಸಿಬ್ಬಂದಿ ವಿವರ: ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ- ಒಟ್ಟು 1,500 ಪೊಲೀಸ್ ಅಧಿಕಾರಿ ಸಿಬ್ಬಂದಿ ನಿಯೋಜನೆ. 46 ಪಿ.ಎಸ್.ಐ‌ ಸೆಕ್ಟರ್ ಮೊಬೈಲ್, 14 ಪಿ.ಐ ಸೂಪರ್ ವಿಷನ್ ಸೆಕ್ಟರ್ ಅಧಿಕಾರಿ, 4 ಎ.ಸಿ.ಪಿ ನೋಡಲ್ ಅಧಿಕಾರಿ ನೇಮಕ,
1003 ಪೊಲೀಸ್ ಸಿಬ್ಬಂದಿ, 350 ಗೃಹ ರಕ್ಷಕ ಸಿಬ್ಬಂದಿ, 17 ಫಾರೆಸ್ಟ್ ಗಾರ್ಡ್, 36 ಅತಿಸೂಕ್ಷ್ಮ ಮತಗಟ್ಟೆಗೆ ಕೇಂದ್ರೀಯ ಭದ್ರತಾ ಪಡೆ, 16 ASI ನಿಯೋಜನೆ, C.A.P.F- 2, KSRP- 1.

ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ 1,600 ಪೊಲೀಸ್ ಅಧಿಕಾರಿ ಸಿಬ್ಬಂದಿಗಳ ನಿಯೋಜನೆ: CAPF- 3, KSRP- 9,

ಮತಗಟ್ಟೆಗೆ ನಿಯೋಜನೆಗೊಂಡಿರುವ ಸಿಬ್ಬಂದಿ:  11,255 ಎಂದು ಎ.ಡಿ.ಸಿ ಡಾ. ಜಿ ಸಂತೋಷ್ ಕುಮಾರ್ ಮಾಹಿತಿ ನೀಡಿದ್ದಾರೆ.

Chaitra Kulal

Recent Posts

ಸಾರಿಗೆ ಬಸ್‌, ಬೊಲೆರೋ ಗೂಡ್ಸ್‌ ವಾಹನ ಮಧ್ಯೆ ಅಪಘಾತ: ಇಬ್ಬರಿಗೆ ಗಾಯ

ಪಟ್ಟಣದ ಬೈಪಾಸ್‌ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್‌ ಮತ್ತು ತರಕಾರಿ…

16 mins ago

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

35 mins ago

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

52 mins ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

1 hour ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

2 hours ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

2 hours ago