ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆ ತಪ್ಪಿಸಲು ಹೊಸ ನಿಯಮ ಜಾರಿಯಾಗಿದೆ. ನಾಳೆಯಿಂದ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಅವಕಾಶ ಇಲ್ಲ. ಹದಿನೆಂಟು ವರ್ಷದ ಕೆಳಗಿನ ಮಕ್ಕಳು, ಹಿರಿಯ ನಾಗರಿಕರು ಮತ್ತು ಮಹಿಳೆಯರಿಗೆ ವಿನಾಯತಿ ನೀಡಲಾಗಿದೆ. ಆದರೆ ಪುರುಷ ಹಿಂಬದಿ ಸವಾರರು ದ್ವಿಚಕ್ರ ವಾಹನದಲ್ಲಿ ತೆರಳುವಂತಿಲ್ಲ.
ಒಂದು ವಾರ ಈ ನಿಯಮ ಜಿಲ್ಲೆಯಲ್ಲಿ ಅನುಷ್ಠಾನ ಮಾಡಲಾಗುತ್ತದೆ. ಈ ಹಿಂದೆ ಬೇರೆ ರಾಜ್ಯಗಳಲ್ಲಿ ಅಶಾಂತಿ ಉಂಟಾದಾಗ ಶಾಂತಿ ಸ್ಥಾಪನೆಗೆ ಈ ನಿಯಮವನ್ನ ಜಾರಿಗೆ ತರಲಾಗಿತ್ತು. ಆ ಮೂಲಕ ಹಿಂಸೆ ತಡೆಯಲು ಪುರುಷ ಹಿಂಬದಿ ಸವಾರರಿಗೆ ಬ್ರೇಕ್ ಹಾಕಬಹುದು. ಇಲ್ಲಿ ಮಹಿಳೆಯರು, ಹಿರಿಯ ನಾಗರಿಕರು, ಮಕ್ಕಳಿಗೆ ರಿಯಾಯಿತಿ ನೀಡಲಾಗಿದೆ ಎಂದು ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.