ದಕ್ಷಿಣ ಕನ್ನಡ: ಪುತ್ತೂರು ಬೆಳ್ಳಾರೆ ಪ್ರವೀಣ್ ನೆಟ್ಟರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪಟ್ಟಂತೆ ಮೂವರು ಆರೋಪಿಗಳಿಗೆ ಸುಳ್ಯ ನ್ಯಾಯಾಲಯವು ಆಗಸ್ಟ್ ಇಪ್ಪತ್ನಾಲ್ಕರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.
ಬಂಧಿತ ಹಂತಕ ಆರೋಪಿಗಳನ್ನು ಪೊಲೀಸ್ ಕಸ್ಟಡಿ ಮುಗಿದ ಹಿನ್ನೆಲೆ ಪೋಲಿಸರು ಸುಳ್ಯ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ , ಸುಳ್ಯದ ಶಿಹಾಬುದ್ದೀನ್ ,ರಿಯಾಜ್ , ಬಶೀರ್ ಎಳಿಮಲೆ ಬಂಧಿತ ಆರೋಪಿಗಳಾಗಿದ್ದಾರೆ.
ಇನ್ನೂ ಆರೋಪಿಗಳನ್ನು ವಶಕ್ಕೆ ಪಡೆಯುವುದಕ್ಕೆ ಎನ್ ಐ ಎ ಅಧಿಕಾರಿಗಳಿಂದ ಸಿದ್ಧತೆ ನಡೆದಿದ್ದು ಕೋರ್ಟ್ ಗೆ ಅರ್ಜಿ ಸಲ್ಲಿಸಿ ಆರೋಪಿಯನ್ನು ವಶಕ್ಕೆ ಪಡೆದು ಬಳಿಕ ವಿಚಾರಣೆಯನ್ನು ನಡೆಸುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.