News Karnataka Kannada
Sunday, April 28 2024
ಮಂಗಳೂರು

ದಯಾ ಕ್ರಿಯೇಷನ್ ಗೆ ತೃತೀಯ ವರ್ಷದ ಸಂಭ್ರಮ: ಧರ್ಮದರ್ಶಿ ಅವರಿಗೆ ʼಕಲಾಬೊಲ್ಪುʼ ಗೌರವ

New Project 2024 01 09t111452.973
Photo Credit : News Kannada

ವಿಟ್ಲ: ದಯಾ ಕ್ರಿಯೇಷನ್ ಬಾಯರು ಇದರ  ಮೂರನೇ  ವರ್ಷದ ವಾರ್ಷಿಕ ಸಂಭ್ರಮೋತ್ಸವವು ಬ್ರಹ್ಮವರದ ಉಪ್ಪಿನಕೋಟೆ ಎಂಬಲ್ಲಿನ ರಿಲಾಕ್ಸ್‌ ಲೀಶೊರ್‌ ಪಾರ್ಕ್ ನಲ್ಲಿ ದಯಾ ಕ್ರಿಯೇಷನ್ ಅಧ್ಯಕ್ಷರಾದ ಶ್ರೀ ದಯಾನಂದ ಅಮೀನ್ ಬಾಯರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕಲಾಮಾತೆಯ ಸೇವೆ ಎಂದರೆ ದೇವರ ಸೇವೆ ಕಲಾಮಾತೆಗೆ ಜಾತಿ ಬೇಧ ವರ್ಣ ಬೇಧ ಇಲ್ಲ ಎಲ್ಲರೂ ಸಮಾನರು ಎಂದುವುದು ಈ ಕಾರ್ಯಕ್ರಮ ಸಾಕ್ಷಿಯಾಗಿದೆ ಈ ಕಾರ್ಯಕ್ರಮಕ್ಕೆ ಬಂದು ಸ್ವರ್ಗಲೋಕದ ಅನುಭವ ಕಂಡತ್ತಾಯಿತು ಎಂದು ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದ ಧರ್ಮದರ್ಶಿ ಶ್ರೀ ಶ್ರೀಕೃಷ್ಣ ಗುರೂಜಿಯವರು ಆಶೀರ್ವದಿಸಿದರು. ಈ ಸಂಧರ್ಭದಲ್ಲಿ ಪೂಜ್ಯ ಧರ್ಮದರ್ಶಿಯವರನ್ನು ದಯಾ ಕ್ರಿಯೇಷನ್ ವತಿಯಿಂದ ಭಕ್ತಿ ಪೂರ್ವಕವಾಗಿ ಸನ್ಮಾನ ಮಾಡಿ ಕಲಾಬೊಲ್ಪು ಎಂಬ ಬಿರುದು ನೀಡಿ ಗೌರವಿಸಲಾಯಿತು.

ಈ ಸಂಧರ್ಭದಲ್ಲಿ ಹಿರಿಯ ಸಾಹಿತಿ ಶ್ರೀ ತೋಡಿಕ್ಕಾನ ಅಬ್ದುಲ , ಶ್ರೀಧರ್ ಪಿ.ಕೆ ಕುಕ್ಕಾಜೆ, ರಿಲಾಕ್ಸ್‌ ಲೀಶೊರ್‌ ಪಾರ್ಕ್ ನ ವ್ಯವಸ್ಥಾಪಕರಾದ.ಜೋಸ್ನ ಡಿಸಿಲ್ವ.
ಮತ್ತಿತರರು ಉಪಸ್ಥಿತರಿದ್ದರು. ಮೂರನೇ  ವರ್ಷದ ಕಾರ್ಯಕ್ರಮದ ಅಂಗವಾಗಿ ವಿವಿಧ ಆಟೋಟ ಸ್ಪರ್ಧೆ,ಹಾಗೂ ಮನೋರಂಜನ ಕಾರ್ಯಕ್ರಮ ನಡೆಸಲಾಯಿತು. ಸ್ಪರ್ಧೆಯಲ್ಲಿ ವಿಜೇತರಿಗೆ ಪೂಜ್ಯ ಗುರೂಜಿಯವರು ಬಹುಮಾನ ವಿತರಿಸಿದರು.

ದಯಾ ಕ್ರಿಯೇಷನ್ ನ ಕಾರ್ಯದರ್ಶಿ ರವಿ ಎಸ್ ಎಂ ಸ್ವಾಗತಿಸಿ ಕು| ವೈಷ್ಣವಿ ಪುತ್ತೂರು ವಂದಿಸಿದರು. ದಯಾ ಕ್ರಯೇಷನ್ ನ ಉಪಾಧ್ಯಕ್ಷರು ಕು| ಅಶ್ವಿನಿ ಪೆರುವಾಯಿ ಕಾರ್ಯಕ್ರಮ ನಿರೂಪಣೆ ಮಾಡಿದರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು