Categories: ಮಂಗಳೂರು

ದಯಾ ಕ್ರಿಯೇಷನ್ ಗೆ ತೃತೀಯ ವರ್ಷದ ಸಂಭ್ರಮ: ಧರ್ಮದರ್ಶಿ ಅವರಿಗೆ ʼಕಲಾಬೊಲ್ಪುʼ ಗೌರವ

ವಿಟ್ಲ: ದಯಾ ಕ್ರಿಯೇಷನ್ ಬಾಯರು ಇದರ  ಮೂರನೇ  ವರ್ಷದ ವಾರ್ಷಿಕ ಸಂಭ್ರಮೋತ್ಸವವು ಬ್ರಹ್ಮವರದ ಉಪ್ಪಿನಕೋಟೆ ಎಂಬಲ್ಲಿನ ರಿಲಾಕ್ಸ್‌ ಲೀಶೊರ್‌ ಪಾರ್ಕ್ ನಲ್ಲಿ ದಯಾ ಕ್ರಿಯೇಷನ್ ಅಧ್ಯಕ್ಷರಾದ ಶ್ರೀ ದಯಾನಂದ ಅಮೀನ್ ಬಾಯರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕಲಾಮಾತೆಯ ಸೇವೆ ಎಂದರೆ ದೇವರ ಸೇವೆ ಕಲಾಮಾತೆಗೆ ಜಾತಿ ಬೇಧ ವರ್ಣ ಬೇಧ ಇಲ್ಲ ಎಲ್ಲರೂ ಸಮಾನರು ಎಂದುವುದು ಈ ಕಾರ್ಯಕ್ರಮ ಸಾಕ್ಷಿಯಾಗಿದೆ ಈ ಕಾರ್ಯಕ್ರಮಕ್ಕೆ ಬಂದು ಸ್ವರ್ಗಲೋಕದ ಅನುಭವ ಕಂಡತ್ತಾಯಿತು ಎಂದು ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದ ಧರ್ಮದರ್ಶಿ ಶ್ರೀ ಶ್ರೀಕೃಷ್ಣ ಗುರೂಜಿಯವರು ಆಶೀರ್ವದಿಸಿದರು. ಈ ಸಂಧರ್ಭದಲ್ಲಿ ಪೂಜ್ಯ ಧರ್ಮದರ್ಶಿಯವರನ್ನು ದಯಾ ಕ್ರಿಯೇಷನ್ ವತಿಯಿಂದ ಭಕ್ತಿ ಪೂರ್ವಕವಾಗಿ ಸನ್ಮಾನ ಮಾಡಿ ಕಲಾಬೊಲ್ಪು ಎಂಬ ಬಿರುದು ನೀಡಿ ಗೌರವಿಸಲಾಯಿತು.

ಈ ಸಂಧರ್ಭದಲ್ಲಿ ಹಿರಿಯ ಸಾಹಿತಿ ಶ್ರೀ ತೋಡಿಕ್ಕಾನ ಅಬ್ದುಲ , ಶ್ರೀಧರ್ ಪಿ.ಕೆ ಕುಕ್ಕಾಜೆ, ರಿಲಾಕ್ಸ್‌ ಲೀಶೊರ್‌ ಪಾರ್ಕ್ ನ ವ್ಯವಸ್ಥಾಪಕರಾದ.ಜೋಸ್ನ ಡಿಸಿಲ್ವ.
ಮತ್ತಿತರರು ಉಪಸ್ಥಿತರಿದ್ದರು. ಮೂರನೇ  ವರ್ಷದ ಕಾರ್ಯಕ್ರಮದ ಅಂಗವಾಗಿ ವಿವಿಧ ಆಟೋಟ ಸ್ಪರ್ಧೆ,ಹಾಗೂ ಮನೋರಂಜನ ಕಾರ್ಯಕ್ರಮ ನಡೆಸಲಾಯಿತು. ಸ್ಪರ್ಧೆಯಲ್ಲಿ ವಿಜೇತರಿಗೆ ಪೂಜ್ಯ ಗುರೂಜಿಯವರು ಬಹುಮಾನ ವಿತರಿಸಿದರು.

ದಯಾ ಕ್ರಿಯೇಷನ್ ನ ಕಾರ್ಯದರ್ಶಿ ರವಿ ಎಸ್ ಎಂ ಸ್ವಾಗತಿಸಿ ಕು| ವೈಷ್ಣವಿ ಪುತ್ತೂರು ವಂದಿಸಿದರು. ದಯಾ ಕ್ರಯೇಷನ್ ನ ಉಪಾಧ್ಯಕ್ಷರು ಕು| ಅಶ್ವಿನಿ ಪೆರುವಾಯಿ ಕಾರ್ಯಕ್ರಮ ನಿರೂಪಣೆ ಮಾಡಿದರು

Ramya Bolantoor

Recent Posts

ಪಾಕ್​ ಆಕ್ರಮಿತ ಕಾಶ್ಮೀರದಲ್ಲಿ ಭುಗಿಲೆದ್ದ ಘರ್ಷಣೆ

ವಿದ್ಯುತ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪಾಕ್ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಾಫರಾಬಾದ್ ನ ಹಲವು ಪ್ರದೇಶಗಳಲ್ಲಿ…

13 mins ago

ಕ್ರಿಕೆಟ್ ಪಂದ್ಯದ ವೇಳೆ 21 ವರ್ಷದ ಯುವಕನನ್ನು ಥಳಿಸಿ ಹತ್ಯೆ

ವಾಯುವ್ಯ ದೆಹಲಿಯ ಭಾರತ್ ನಗರ ಪ್ರದೇಶದಲ್ಲಿ ಕ್ರಿಕೆಟ್ ಪಂದ್ಯದ ವೇಳೆ ತನ್ನ ಸಹೋದರ ಮತ್ತು ಇತರ ಆಟಗಾರರ ನಡುವಿನ ಜಗಳದಲ್ಲಿ…

15 mins ago

ಬೀದರ್‌ನಲ್ಲಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್‌ಗಿರಿ

ಬೀದರ್‌ನ ಬಸವಕಲ್ಯಾಣದಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ ನಡೆದಿದೆ. ಬಸವಕಲ್ಯಾಣದ ಹೊರವಲಯದ ಪಾರ್ಕ್‌ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜೊತೆ ಕುಳಿತಿದ್ದಕ್ಕೆ ಮುಸ್ಲಿಂ…

30 mins ago

ಕೈ ತಪ್ಪಿದ ವಿಧಾನಪರಿಷತ್ ಟಿಕೆಟ್: ಮಾಜಿ ಶಾಸಕ ರಘುಪತಿ ಭಟ್ ಅಸಮಾಧಾ‌ನ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಉಡುಪಿ…

46 mins ago

ಇಂದು ದಾದಿಯರ ದಿನ; ದಣಿವರಿಯಿಲ್ಲದೆ ಕೆಲಸ ಮಾಡುವ ದಾದಿಯರಿಗೊಂದು ಸಲಾಂ

ಪ್ರಪಂಚದಾದ್ಯಂತ ಮೇ 12ರಂದು ಅಂತರಾಷ್ಟ್ರೀಯ ದಾದಿಯರ ದಿನ ವನ್ನಾಗಿ ಆಚರಿಸಲಾಗುತ್ತದೆ. ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನದ ಗೌರವಾರ್ಥವಾಗಿ ವಿಶ್ವಾದ್ಯಂತ ಅಂತರರಾಷ್ಟ್ರೀಯ…

57 mins ago

ಜೈಲಿನಲ್ಲೇ ಹೃದಯಾಘಾತವಾಗಿ ಕೈದಿ ಮೃತ್ಯು

ವಿಚಾರಣಾಧೀನ ಕೈದಿಯೋರ್ವ ಜೈಲಿನಲ್ಲೇ ಹೃದಯಾಘಾತ ಸಂಭವಿಸಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಹಿರಿಯಡಕ ಸಬ್ ಜೈಲಿನಲ್ಲಿ ನಡೆದಿದೆ.

1 hour ago