News Karnataka Kannada
Friday, May 17 2024
ಮಂಗಳೂರು

ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ: ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳೊಂದಿಗೆ ಡಿಸಿ ಸಂವಾದ

ಇದೇ ಮಾರ್ಚ್ 25ರಿಂದ ಏಪ್ರಿಲ್ 6ರ ವರೆಗೆ ರಾಜ್ಯಾದ್ಯಂತ ನಡೆಯಲಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು ಶೇ. ನೂರರಷ್ಟು ಶ್ರಮವಹಿಸಿ ಓದುವ ಮೂಲಕ ಹೆಚ್ಚು ಅಂಕಗಳಿಸಿ ಚಾಂಪಿಯನ್ ಗಳಾಗುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಕರೆ ನೀಡಿದರು.
Photo Credit : News Kannada

ಮಂಗಳೂರು: ಇದೇ ಮಾರ್ಚ್ 25ರಿಂದ ಏಪ್ರಿಲ್ 6ರ ವರೆಗೆ ರಾಜ್ಯಾದ್ಯಂತ ನಡೆಯಲಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು ಶೇ. ನೂರರಷ್ಟು ಶ್ರಮವಹಿಸಿ ಓದುವ ಮೂಲಕ ಹೆಚ್ಚು ಅಂಕಗಳಿಸಿ ಚಾಂಪಿಯನ್ ಗಳಾಗುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಕರೆ ನೀಡಿದರು.

ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿರುವ ಜಿಲ್ಲೆಯ ಎಲ್ಲಾ ಶಾಲೆಗಳ ವಿದ್ಯಾರ್ಥಿಗಳೊಂದಿಗೆ ಮಾರ್ಚ್ 6ರಂದು ಬುಧವಾರ ತಮ್ಮ ಕಚೇರಿಯಿಂದ ವಿಡಿಯೋ ಸಂವಾದ ನಡೆಸಿ ಶುಭ ಹಾರೈಸಿದರು.

ಎಸ್ ಎಸ್ ಎಲ್ ಸಿಯಂತಹ ಮಹತ್ವದ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಉತ್ತಮ ಮನಸ್ಥಿತಿಯನ್ನಿಟ್ಟುಕೊಳ್ಳಬೇಕು, ಇದೇ ಮೊದಲ ಬಾರಿಗೆ ನಿಮ್ಮ ಶಾಲೆ ದಾಟಿ ನಿಮ್ಮನ್ನು ನೀವೇ ಗುರುತಿಸಿಕೊಳ್ಳುವ ಪರೀಕ್ಷೆಯನ್ನು ಎದುರಿಸಲು ಸಜ್ಜಾಗುತ್ತಿದ್ದೀರಿ. ಆ ಗುರಿಯನ್ನು ಸಾಧಿಸಲು ಮಾನಸಿಕ ಸ್ಥಿತಿ ಉತ್ತಮವಿರಬೇಕು. ಶಿಸ್ತು, ಆತ್ಮವಿಶ್ವಾಸ ಅತ್ಯಂತ ಮುಖ್ಯ. ಯಾವುದೇ ಕಾರಣಕ್ಕೂ ಇವುಗಳಿಂದ ವಿಚಲಿತರಾಗಬಾರದು. ಶಿಸ್ತಿನ ಸಮಯ ಪಾಲನೆಯಿಂದ ಹೆಚ್ಚು ಅಂಕ ಗಳಿಸಲು ಸಾಧ್ಯವಾಗುವುದು. ಅದಕ್ಕಾಗಿ ಒಂದು ಕ್ಷಣ ಯೋಚಿಸಬೇಕು, ನಾನು ಯಾರು ಮತ್ತು ಏನನ್ನು ಎದುರಿಸಲು ಹೊರಟಿದ್ದೇನೆ ಎಂಬುದನ್ನು ಅರಿತುಕೊಳ್ಳಬೇಕು. ಪರೀಕ್ಷೆ ಎದುರಿಸಲಿರುವ ಜಿಲ್ಲೆಯ ಎಲ್ಲಾ ಎಸ್ ಎಸ್ ಎಲ್ ಸಿ ಮಕ್ಕಳು ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸುವ ಮೂಲಕ ಚಾಂಪಿಯನ್ ಗಳಾಗಿ ಹೊರ ಹೊಮ್ಮಬೇಕು ಎಂದು ಹೇಳಿದರು.

ಆತಂಕ ಪಡದಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದ ಅವರು, ಎಸ್ ಎಸ್ ಎಲ್ ಸಿ ಪತ್ರಿಕೆಯ ಮೂಲಕ ನಿಮ್ಮ ತಾಕತ್ತು ಹೊರ ಜಗತ್ತಿಗೆ ತಿಳಿಯುವುದರಿಂದ ಅದಕ್ಕಾಗಿ ಶೇಖಡ ನೂರರಷ್ಟು ಶ್ರಮ ಹಾಕಿದ್ದಲ್ಲಿ ಅದನ್ನು ಸಾಧಿಸಬಹುದು ಎಂದು ಹೇಳಿದರು. ಇದರೊಂದಿಗೆ ಓದುವಿಕೆಗೆ ಸಹಕಾರಿಯಾಗುವ ಕೆಲ ಸೂಚನೆಗಳನ್ನೂ ನೀಡಿದರು.

ಪರೀಕ್ಷೆಯಲ್ಲಿ ಸಮಯ ಪಾಲನೆ ಹೇಗೆ ಎಂಬ ಪ್ರಶ್ನೆಗೆ ಉತ್ತರಿಸುತ್ತ, 80 ಅಂಕಗಳ ಪರೀಕ್ಷೆಯಲ್ಲಿ ಮೊದಲ 10 ನಿಮಿಷ ಪ್ರಶ್ನೆ ಪತ್ರಿಕೆಯನ್ನು ಕೂಲಂಕುಶವಾಗಿ ಓದಿ ಅದನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಬೇಕು. ಕೊನೆಯ 10 ನಿಮಿಷಗಳನ್ನು ಬರೆದಿರುವ ಉತ್ತರಗಳನ್ನು ಪರೀಕ್ಷಿಸಿಕೊಳ್ಳಲು ಮೀಸಲಿರಿಸಿಕೊಳ್ಳಬೇಕು. ಈ ಮಧ್ಯದಲ್ಲಿ ಸಿಗುವ ವೇಳೆಯನ್ನು ಎರಡು, ಐದು ಅಥವಾ ಇತರೆ ಅಂಕಗಳಿಗೆ ಎಷ್ಟು ಪ್ರಮಾಣದಲ್ಲಿ ಬರೆಯಲು ಕಾಲಾವಕಾಶ ನೀಡಬೇಕು ಎನ್ನುವ ಲೆಕ್ಕಾಚಾರ ಹಾಕಿಕೊಳ್ಳಬೇಕು ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು