News Karnataka Kannada
Tuesday, May 07 2024
ಮಂಗಳೂರು

ಪಠ್ಯದಿಂದ ಕಯ್ಯಾರ ಕಿಂಞಣ್ಣ ರೈ ಹೆಸರು ಕೈಬಿಟ್ಟಿರುವುದು ಸರಿಯಲ್ಲ: ಐಕಳ ಹರೀಶ್ ಶೆಟ್ಟಿ

Kayyara Kinyanna
Photo Credit :

ಮಂಗಳೂರು: ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯಲ್ಲಿ ಪಠ್ಯ ಪುಸ್ತಕ ಪರಿಷ್ಕರಣ ಸಮಿತಿಯು ಏಳನೇ ತರಗತಿಯ ಸಮಾಜ ವಿಜ್ಞಾನ ಪುಸ್ತಕದಲ್ಲಿ ಕಯ್ಯಾರ ಕಿಂಞಣ್ಣ ರೈ ಅವರ ಹೆಸರನ್ನು ಕೈಬಿಟ್ಟಿರುವುದು ಸರಿಯಲ್ಲ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು ಹೇಳಿದ್ದಾರೆ.

ಕರ್ನಾಟಕ ಏಕೀಕರಣ ಹಾಗೂ ಗಡಿ ವಿವಾದಗಳು ಎಂಬ ಪಠ್ಯದಲ್ಲಿ ಹಿಂದೆ ಕಯ್ಯಾರ ಕಿಂಞಣ್ಣ ರೈಗಳು ಕರ್ನಾಟಕ ಏಕೀಕರಣಕ್ಕಾಗಿ ತನ್ನ ಕೊನೆ ಉಸಿರಿನ ತನಕ ಹೋರಾಟ ಮಾಡಿದ್ದರು ಎಂದಿತ್ತು. ಈಗ ಆ ವಾಕ್ಯವನ್ನು ತೆಗೆದು, ಮಂಜೇಶ್ವರ ಗೋವಿಂದ ಪೈಗಳ ಹೆಸರನ್ನು ಸೇರಿಸಲಾಗಿದೆ. ಆದರೆ ಗೋವಿಂದ ಪೈಗಳು ೧೯೬೩ರಲ್ಲಿ ವೃದ್ಧಾಪ್ಯದಿಂದಾಗಿ ನಿಧನ ಹೊಂದಿದ್ದು, ಅವರಿಗೆ ಏಕೀಕರಣ ವಿಷಯದಲ್ಲಿ ಪರಿಣಾಮಕಾರಿ ಹೋರಾಟ ಮಾಡಲು ಅವಕಾಶ ಸಿಗಲಿಲ್ಲ.

೧೯೫೬ರಲ್ಲಿ ಭಾಷಾವಾರು ಪ್ರಾಂತ್ಯ ರಚನೆಯಾಗಿದ್ದು, ಆ ಬಳಿಕ ಅವರು ಬದುಕಿದ್ದು ಕೇವಲ ೭ ವರ್ಷ ಮಾತ್ರ. ಆಗ ಅವರು ಅಸ್ವಸ್ಥತೆಯಿಂದಿದ್ದು, ತನ್ನ ಜತೆಗೆ ಶಿಷ್ಯ ಕಯ್ಯಾರ ಕಿಂಞಣ್ಣ ರೈಗಳನ್ನು ಕರೆದುಕೊಂಡು ಹೋಗುತ್ತಿದ್ದರು. ಅದೇ ಕಯ್ಯಾರ ಕಿಂಞಣ್ಣ ರೈ ಅವರು ೨೦೧೫ರಲ್ಲಿ ನಿಧನ ಹೊಂದುವವರೆಗೂ ಕಾಸರಗೋಡು ಕರ್ನಾಟಕಕ್ಕೆ ಸೇರಬೇಕು ಎಂದು ಬಲವಾಗಿ ಹೇಳುತ್ತಾ ಹೋರಾಟ ಮಾಡಿದ್ದರು. ಅಂಥವರ ಹೆಸರನ್ನು ಪಠ್ಯದಿಂದ ಕೈಬಿಟ್ಟಿರುವುದು ಯಾವುದೇ ಕಾರಣಕ್ಕೂ ಸರಿಯಲ್ಲ. ಆದ್ದರಿಂದ ಅವರ ಹೆಸರನ್ನು ಕೂಡಲೇ ಪಠ್ಯದಲ್ಲಿ ಸೇರಿಸಲು ಕ್ರಮ ಕೈಗೊಳ್ಳಬೇಕು ಎಂದು ಐಕಳ ಹರೀಶ್ ಶೆಟ್ಟಿ ಅವರು ಸರಕಾರವನ್ನು ಆಗ್ರಹಿಸಿದ್ದಾರೆ.

ಕಯ್ಯಾರ ಕಿಂಞಣ್ಣ ರೈ ಅವರು ಬಂಟರ ಹೆಮ್ಮೆಯಾಗಿದ್ದು, ಅವರು ಇಡೀ ತುಳುನಾಡಿನ ಪ್ರತೀಕವೂ ಆಗಿದ್ದಾರೆ. ಆದ್ದರಿಂದ ಅವರಿಗೆ ನೇರವಾಗಿ ಹಾಗೂ ಪರೋಕ್ಷವಾಗಿ ಮಾಡುವ ಯಾವುದೇ ಅವಮಾನವು ಇಡೀ ಬಂಟ ಸಮುದಾಯ ಹಾಗೂ ಇಡೀ ತುಳುನಾಡಿಗೆ ಮಾಡುವ ಅನ್ಯಾಯವಾಗುತ್ತದೆ. ಆದ್ದರಿಂದ ಅವರ ಹೆಸರನ್ನು ಪಠ್ಯದಲ್ಲಿ ಸೇರಿಸಲೇ ಬೇಕು ಎಂದು ಐಕಳ ಹರೀಶ್ ಶೆಟ್ಟಿ ಆಗ್ರಹಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು