News Karnataka Kannada
Saturday, May 04 2024
ಮಂಗಳೂರು

ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕೆಲವು ನಿಯಮಗಳ ತಿದ್ದುಪಡಿಗೆ ಒತ್ತಾಯ

Demand for amendment of certain rules of Gram Swaraj and Panchayati Raj
Photo Credit : By Author

ಮಂಗಳೂರು: ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕೆಲವು ನಿಯಮಗಳ ತಿದ್ದುಪಡಿಗಳನ್ನು ರಾಜ್ಯ ಸರ್ಕಾರವು ಸರ್ಕಾರ ಈ ಕೂಡಲೇ ಹಿಂದಕ್ಕೆ ಪಡೆಯಬೇಕೆಂದು ಶಾಸಕರಾದ ಮಂಜುನಾಥ ಭಂಡಾರಿ ಅವರು ಒತ್ತಾಯ ಮಾಡಿದ್ದಾರೆ.

ರಾಜ್ಯ ಸರಕಾರವು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇ ಲಾಖೆಯ ಅಪರ ಮುಖ್ಯಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಡವಳಿಯ ಮೂಲಕ ಆದೇಶವೊಂದನ್ನು ಪಂಚಾಯತ್ಗಳಿಗೆ ರವಾನಿಸಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಅಧ್ಯಕ್ಷರ ಹಾಗೂ ಪಂಚಾಯತ್  ಸದಸ್ಯರ ಅಧಿಕಾರವನ್ನು ಮೊಟಕುಗೊಳಿಸಿ ಗ್ರಾಮ ಸ್ವರಾಜ್ಯದ ಆಶಯಗಳಿಗೆ ಕೊಡಲಿಯೇಟು ನೀಡಿದ್ದಾರೆ ಎಂದು ಶಾಸಕರಾದ ಮಂಜುನಾಥ ಭಂಡಾರಿಯವರು ಆರೋಪಿಸಿದ್ದಾರೆ.

ಸರ್ಕಾರವು ಈ ಹಿಂದೆ ಗ್ರಾಮಪಂಚಾಯಿತಿ ಅಧ್ಯಕ್ಷರಿಗೆ ನೀಡಿರುವ ಆರ್ಥಿಕ ವ್ಯವಹಾರಗಳಿಗೆ ಸಹಿ ಮಾಡುವ ಅಧಿಕಾರವನ್ನು ಪ್ರಧಾನಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ನಡೆದ ಸಮಿತಿಯ ಸಭೆಯಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್  ಅಧಿನಿಯಮ 1993ರ ಕೆಲವು ಪ್ರಕರಣಗಳಿಗೆ ತಿದ್ದುಪಡಿ ಮಾಡುವ ಮೂಲಕ ಗ್ರಾಮಪಂಚಾಯತ್ಅಧ್ಯಕ್ಷರ ಮತ್ತು ಸದಸ್ಯರ ಅಧಿಕಾರವನ್ನು ಮೊಟಕುಗೊಳಿಸಿದೆ.

ಕೆಲ ಗ್ರಾಮ ಪಂಚಾಯತಿಗಳಲ್ಲಿ ಸಾಮಾನ್ಯ ಸಭೆ ಸಕಾಲದಲ್ಲಿ ನಡೆಯದ ನೆಪಮುಂದಿರಿಸಿ ಸಾಮಾನ್ಯ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದು ವಿತರಿಸಬೇಕಾದ ಕಟ್ಟಡ ಪರವಾನಿಗೆ, ಕಾರ್ಖಾನೆ ಸ್ಥಾಪಿಸಲು ಅನುಮತಿ ನೀಡಲು, ಹೋಟೇಲು/ಅಂಗಡಿಗಳಿಗೆ ಪರವಾನಿಗೆ ನೀಡುವ ಪಂಚಾಯತ್ ರಾಜ್  ಅಧಿನಿಯಮ 1993ರ ಪ್ರಕರಣ 64ರಿಂದ 70ಕ್ಕೆ ತಿದ್ದುಪಡಿ ಮೂಲಕ ಸದ್ರಿ ಪ್ರಮಾಣ ಪತ್ರಗಳಿಗೆ ಸಾಮಾನ್ಯ ಸಭೆ ಅನುಮೋದನೆ ಇಲ್ಲದೆ ನೇರವಾಗಿ ಪಿಡಿಒಗಳು ವಿತರಿಸಿ ಮುಂದಿನ ಸಾಮಾನ್ಯ ಸಭೆಗೆ ಮಾಹಿತಿ ಒದಗಿಸಲು ಆದೇಶಿಸಲಾಗಿದೆ.

ಹಾಗೆಯೇ9/11 ಮತ್ತು11ಬಿ, ನಿರಾಕ್ಷೇಪಣಾ ಪತ್ರವನ್ನೂ ಸಾಮಾನ್ಯ ಸಭೆ ಅನುಮೋದನೆ ಇಲ್ಲದೆ ನೇರವಾಗಿ ಪಿಡಿಒಗಳು ವಿತರಿಸಿ ಮುಂದಿನ ಸಾಮಾನ್ಯ ಸಭೆಗೆ ಮಾಹಿತಿ ಒದಗಿಸಲು ಆದೇಶಿಸಲಾಗಿದೆ. ಇದು ಪ್ರಜಾಪ್ರಭುತ್ವದ ಬುಡಕ್ಕೆ ಕೊಡಲಿ ಏಟು ಹಾಕಿದೆ ಹಾಗೂ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುತ್ತಿರುವ ಚುನಾಯಿತ ಜನಪ್ರತಿನಿಧಿಗಳ ಕತ್ತು ಹಿಸುಕಿದಂತಾಗಿದೆ.

2006ನೇ ಇಸ್ವಿಯಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಪಂಚಾಯತ್ ರಾಜ್ ಕಾಯ್ದೆಗೆ ತಂದ ತಿದ್ದುಪಡಿಯ ಆಧಾರದ ಮೇಲೆ ಗ್ರಾಮ ಪಂಚಾಯತಿಯ ಹಣಕಾಸಿನ ವ್ಯವಹಾರವನ್ನು ಸರ್ಕಾರ ಅಧಿಸೂಚಿಸುವ ಅಧಿಕಾರಿ ಅಥವಾ ಪ್ರಾಧಿಕಾರ ನಿರ್ವಹಿಸಲು ಇರುವ ಉಪಬಂಧವಿದ್ದು ಅಧಿಸೂಚನೆಯ ಮೂಲಕ ಅಧ್ಯಕ್ಷರು ಮತ್ತು ಪಿಡಿಒಗೆ ಜಂಟಿಯಾಗಿ ನಿರ್ವಹಿಸಲು ನೀಡಿದ್ದ ಅವಕಾಶವನ್ನು ಹಿಂಪಡೆಯಲಾಗಿದೆ.

ಕೆಲ ಅಧ್ಯಕ್ಷರು ಯೋಜನೆಗಳ ಬಿಲ್ಲು ಪಾವತಿಯನ್ನು ವಿಳಂಬಿಸುವುದನ್ನು ಮತ್ತು ಚುನಾಯಿತ ಜನಪ್ರತಿನಿಧಿಗಳು ಹಣಕಾಸಿನ ವ್ಯವಹಾರಕ್ಕೆ ಉತ್ತರದಾಯಿತ್ವ ಹೊಂದಿಲ್ಲದಿರುವುದನ್ನು ನೆಪವಾಗಿವಾಗಿರಿಸಿ ಗ್ರಾಮಪಂಚಾಯತಿ ಯಹಣಕಾಸಿನ ವ್ಯವಹಾರವನ್ನು ಪಿಡಿಓ ಮತ್ತು ಲೆಕ್ಕ ಸಹಾಯಕರಿಗೆ ಜಂಟಿಯಾಗಿ ನೀಡಲಾಗಿದೆ. ಇದರಿಂದ ಭ್ರಷ್ಟಾಚಾರ ಇನ್ನಷ್ಟು ಹೆಚ್ಚಾಗಲಿದೆ.

ಆದ್ದರಿಂದ ಅಧ್ಯಕ್ಷರ ಹಾಗೂ ಪಂಚಾಯತ್  ಸದಸ್ಯರ ಅಧಿಕಾರವನ್ನು ಮೊಟಕುಗೊಳಿಸಿ ಗ್ರಾಮಸ್ವರಾಜ್ಯದ ಆಶಯಗಳಿಗೆ ಕೊಡಲಿಯೇಟು ನೀಡಿರುವ ಈ ತಿದ್ದುಪಡಿಗಳನ್ನು ರಾಜ್ಯ ಸರ್ಕಾರವು ಸರ್ಕಾರ ಈ ಕೂಡಲೇ ಇದನ್ನು ಹಿಂದಕ್ಕೆ ಪಡೆಯಬೇಕೆಂದು ಸ್ಥಳೀಯ ಜನಪ್ರತಿನಿಧಿಗಳ ಪ್ರತಿನಿಧಿಯಾಗಿ ನಾನು ಸರ್ಕಾರವನ್ನು ಒತ್ತಾಯಿಸುತ್ತೇನೆ. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ಮಾಡಲಾಗುವುದೆಂದು ಸರ್ಕಾರಕ್ಕೆ ಎಚ್ಚರಿಸುತ್ತೇನೆ. ಈ ಬಗ್ಗೆ ಇತರೆ ಸ್ಥಳೀಯ ಸಂಸ್ಥೆಯನ್ನು ಪ್ರತಿನಿಧಿಸುವ ಶಾಸಕರೊಂದಿಗೆ ಸರ್ಕಾರದ ವಿರುದ್ಧ ಉಗ್ರವಾದ ಹೋರಾಟ ರೂಪಿಸಲಾಗುವುದು ಎಂದು ಶಾಸಕರಾದ ಮಂಜುನಾಥ ಭಂಡಾರಿ ಅವರು ತಿಳಿಸಿರುತ್ತಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು