News Karnataka Kannada
Thursday, May 02 2024
ಮಂಗಳೂರು

ಅಪಾಯಕಾರಿ ಸ್ಥಿತಿಯಲ್ಲಿರುವ ಫ್ಲೆಕ್ಸ್‌ ತೆರವಿಗೆ ಜಿಲ್ಲಾಧಿಕಾರಿ ಸೂಚನೆ

Deputy Commissioner instructs to remove flexes in dangerous condition
Photo Credit : News Kannada

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಚುರುಕುಗೊಂಡಿದ್ದು, ಜಿಲ್ಲೆಯಾದ್ಯಂತ ಭಾರೀ ಮಳೆಯಿಂದಾಗಿ ಅಲ್ಲಲ್ಲಿ ವಿಕೋಪಗಳು ಸಂಭವಿಸುತ್ತಿರುವ ಬಗ್ಗೆ ವರದಿಯಾಗುತ್ತಿದೆ.

ಈ ಬಗ್ಗೆ ಸೂಕ್ತ ರಕ್ಷಣಾ ಕಾರ್ಯಾಚರಣೆಗಳ ಜೊತೆಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ಜಿಲ್ಲಾಡಳಿತದ ಕರ್ತವ್ಯವಾಗಿರುತ್ತದೆ. ಜಿಲ್ಲೆಯ ರಸ್ತೆಯ ಬದಿಗಳಲ್ಲಿ ಅಳವಡಿಸಲಾಗಿರುವ ಜಾಹೀರಾತು ಫಲಕಗಳು ಗಾಳಿ ಮಳೆಯ ಪರಿಣಾಮದಿಂದಾಗಿ ರಸ್ತೆಗೆ ಬಿದ್ದು ಅಪಘಾತ, ಸಾರ್ವಜನಿಕರ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆ ಇದೆ.

ಈ ಕಾರಣದಿಂದ ಮಹಾನಗರ ಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ರಸ್ತೆಯ ಬದಿಗಳಲ್ಲಿ ಅಪಾಯಕಾರಿ ಜಾಹೀರಾತು ಫಲಕ, ಪ್ಲೆಕ್ಸ್ ಗಳ (ಆಧಿಕೃತ ಅನಧಿಕೃತ) ಬಗ್ಗೆ ಸಮೀಕ್ಷೆ ನಡೆಸಿ ಅಪಾಯಕಾರಿಯಾಗಿ ಕಂಡುಬರುವ ಜಾಹೀರಾತು ಫಲಕಗಳನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಈ ಕೂಡಲೇ ತೆರವುಗೊಳಿಸುವಂತೆ ಪಾಲಿಕೆ ಆಯುಕ್ತರಿಗೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು