ಮಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆಶಿ ವಿರುದ್ದ ಅವಹೇಳನಕಾರಿ ವಿಡಿಯೋ ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನ ಸುರತ್ಕಲ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ದೂರು ನೀಡಿದ ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧಿಸಲಾಗಿದ್ದು, ಈತನನ್ನು ಉತ್ತರ ಕನ್ನಡ ಮೂಲದ ಅನಿಲ್ ಕುಮಾರ್ ಎಂದು ಗುರುತಿಸಲಾಗಿದೆ.
ಆರೋಪಿ ಸುಮಾರು 12 ವರ್ಷದಿಂದ ಸುರತ್ಕಲ್ನಲ್ಲಿ ವಾಸವಾಗಿದ್ದು, ಕ್ಯಾಬ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದಾನೆ. ಈತ ಸಾಮಾಜಿಕ ಜಾಲತಾಣಗಳಲ್ಲಿ ನಿಂದಿಸಿ ವಿಡಿಯೋ ಹರಿಬಿಟ್ಟಿದ್ದ. ಕೆಟ್ಟ ಪದಗಳಲ್ಲಿ ನಿಂದಿಸಿ ವಿಡಿಯೋ ಮಾಡಿದ್ದ. ಸಿಎಂ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ವಿರುದ್ಧ ಅಶ್ಲೀಲ ಪದ ಬಳಸಿದ್ದ. ಈ ಬಗ್ಗೆ ಎನ್ಎಸ್ ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವಾ ಮಂಗಳೂರು ಪೊಲೀಸ್ ಕಮಿಷನರ್ ಗೆ ದೂರು ನೀಡಿದ್ದರು. ದೂರಿನ ಅನ್ವಯ ಅನಿಲ್ನನ್ನ ಬಂಧಿಸಲಾಗಿದೆ.
ವಿಚಾರಣೆ ವೇಳೆ, ತಾನು ರೇಶನ್ ಕಾರ್ಡ್ ಇಲ್ಲೆದೇ ಮೂರು ತಿಂಗಳಿಂದ ಪರದಾಡಿದ್ದೇನೆ ಆದರಿಂದ ನೊಂದು ವಿಡಿಯೋ ಮಾಡಿ ಬಿಟ್ಟಿದ್ದಾಗಿ ತಿಳಿಸಿದ್ದಾನೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ಪ್ರಕರಣ ದಾಖಲಾಗಿದೆ.