ಉಳ್ಳಾಲ: ಶ್ರಾವಣ ಅಮವಾಸ್ಯೆಯ ಶುಭ ಶುಕ್ರವಾರದಂದು ಉಳ್ಳಾಲ ತಾಲೂಕಿನ ಪುರಾಣ ಪ್ರಸಿದ್ಧ ಸೋಮೇಶ್ವರ, ಸೋಮನಾಥ ಕ್ಷೇತ್ರದಲ್ಲಿ ಸಹಸ್ರಾರು ಮಂದಿ ಭಕ್ತಾಧಿಗಳು ಪವಿತ್ರ ತೀರ್ಥ ಸ್ನಾನಗೈದು ಪುನೀತರಾದರು. ಸೋಮೇಶ್ವರ, ಸೋಮನಾಥ ಕ್ಷೇತ್ರದಲ್ಲಿ ಆಚರಿಸಲ್ಪಡುವ ಐದು ವಿಶೇಷ ಪರ್ವಗಳಲ್ಲಿ ಶ್ರಾವಣ ಅಮವಾಸ್ಯೆಯ ತೀರ್ಥ ಸ್ನಾನವು ತುಂಬಾ ಮಹತ್ವದ್ದಾಗಿದೆ.
ಶ್ರಾವಣ ಅಮವಾಸ್ಯೆಯಂದು ಸೋಮೇಶ್ವರದ ಪೃಕೃತಿ ರಮಣೀಯ ಕಡಲ ತೀರಕ್ಕೆ ಸಹಸ್ರಾರು ಭಕ್ತಾಧಿಗಳು ಬಂದು ತೀರ್ಥ ಸ್ನಾನ ಮಾಡುತ್ತಾರೆ.ಇಲ್ಲಿನ ವಾಡಿಕೆ ಪ್ರಕಾರ ಮೊದಲು ದೇವಸ್ಥಾನದ ಗದಾ ತೀರ್ಥ ಕೆರೆಯ ಹಿನ್ನೀರಿನಲ್ಲಿ ಸ್ನಾನಗೈದು ಬಳಿಕ ಸಮುದ್ರ ಸ್ನಾನ ಮಾಡಿದರೆ ಪಾಪ ನಾಶವಾಗಿ ಪುಣ್ಯ ಪ್ರಾಪ್ತಿಯಾಗುವುದೆಂಬ ನಂಬಿಕೆಯಿದೆ. ವೈಜ್ಞಾನಿಕ ದೃಷ್ಟಿಯಲ್ಲೂ ಕೆರೆ ಸ್ನಾನದ ಬಳಿಕ ಸಮುದ್ರ ಸ್ನಾನಗೈದರೆ ಉಪ್ಪುನೀರಿಗೆ ಚರ್ಮ ವ್ಯಾಧಿಗಳು ದೂರ ಆಗುತ್ತವೆ ಎಂಬ ನಂಬಿಕೆಯಿಂದ ಅನೇಕ ಭಕ್ತಾಧಿಗಳು ಇಲ್ಲಿ ಬಂದು ತೀರ್ಥ ಸ್ನಾನಗೈದು ಪುನೀತರಾಗುತ್ತಾರೆ.
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…
ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…
ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.
ಸಾಣೂರಿನ ಲೈನ್ ಮ್ಯಾನ್ ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…