News Karnataka Kannada
Thursday, May 09 2024
ಮಂಗಳೂರು

ಧರ್ಮಸ್ಥಳ: ಲಕ್ಷದೀಪೋತ್ಸವದ ಪ್ರಯುಕ್ತದ ಪಾದಯಾತ್ರೆಗೆ 10 ನೇ ವರ್ಷ

dharmasthala-10th-anniversary-of-padayatra-on-the-occasion-of-lakshdeepotsava
Photo Credit : By Author

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಪ್ರಯುಕ್ತ ನಡೆಯುವ ಪಾದಯಾತ್ರೆ ಇದೀಗ 10 ನೇ ವರ್ಷಕ್ಕೆ ಕಾಲಿಟ್ಟಿದೆ. ಈ ಹಿನ್ನೆಲೆಯಲ್ಲಿ ಇದೇ ನವೆಂಬರ್ 19 ರಂದು ನಡೆಯಲಿರುವ ಪಾದಯಾತ್ರೆಯಲ್ಲಿ ಸುಮಾರು 25 ಸಾವಿರ ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ.

ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಿಂದ ಪ್ರಾರಂಭವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದೇಗುಲದವರೆಗೆ ನಡೆಯುವ ಈ ಪಾದಯಾತ್ರೆಯಲ್ಲಿ ಭಕ್ತರು ಶಿವಪಂಚಾಕ್ಷರಿ ಪಠಿಸುತ್ತ ಸಾಗಲಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಎದುರು ಜ್ಯೋತಿ ಬೆಳಗುವ ಮೂಲಕ ಗಣ್ಯರು ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ. ಹತ್ತನೇ ವರ್ಷದ ಪಾದಯಾತ್ರೆಯಾದ ಕಾರಣ ವಿಶೇಷ ಆಕರ್ಷಣೆಯಾಗಿ ಪಾದಯಾತ್ರೆಯಲ್ಲಿ ಕೊಂಬು, ಕಹಳೆ, ಚೆಂಡೆವಾದನಗಳ ಜೊತೆ ನೆಲದ ಸಂಸ್ಕೃತಿಯನ್ನು ಬಿಂಬಿಸುವ ಯಕ್ಷಗಾನ ವೇಷಧಾರಿಗಳು ಹಾಗೂ ಭಜನಾ ತಂಡಗಳು ಪಾಲ್ಗೊಳ್ಳಲಿವೆ.

ಈ ಪಾದಯಾತ್ರೆಯು ಧರ್ಮಸ್ಥಳ ಪ್ರವೇಶಿಸಿದ ಬಳಿಕ, ಅಮೃತವರ್ಷಿಣಿ ಸಭಾಭವನದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರು ಭಕ್ತಾದಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಾದಯಾತ್ರೆಯ ಸಂಚಾಲಕರಾದ ಪೂರನ್ ವರ್ಮ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು