ಧರ್ಮಸ್ಥಳ: ನವಜೀವನ ಸಮಾವೇಶದಲ್ಲಿ ಭಾಗವಹಿಸಲು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಪತ್ನಿ ಅನಿತಾ ಗೆಹ್ಲೋಟ್ ಸೇರಿದಂತೆ ಮೊಮ್ಮಕ್ಕಳೊಂದಿಗೆ ಶ್ರೀ ಮಂಜುನಾಥ್ ಸ್ವಾಮಿ ದರ್ಶನ ಪಡೆದರು.
ದೇವಸ್ಥಾನದ ಆಡಳಿತ ಮಂಡಳಿ ರಾಜ್ಯಪಾಲರಿಗೆ ಸ್ವಾಗತ ಕೋರಿದರು. ಗೌರವಾನ್ವಿತ ರಾಜ್ಯಪಾಲರು ಮತ್ತು ಪತ್ನಿ ಅನಿತಾ ಗೆಹ್ಲೋಟ್ ಅವರು ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಧರ್ಮಾಧಿಕಾರಿಗಳಾದ ಶ್ರೀ ವಿರೇಂದ್ರ ಹೆಗಡೆ ಮತ್ತು ಅವರ ಪತ್ನಿ ಹೇಮಾವತಿ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಹರ್ಷೇಂದ್ರ ಕುಮಾರ್ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.