ಬೆಳ್ತಂಗಡಿ: ಅ.25 ರಂದು ಜರಗುವ ಸೂರ್ಯಗ್ರಹಣದ ಹಿನ್ನಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.
ಮಧ್ಯಾಹ್ನದವರೆಗೆ ಎಂದಿನಂತೆ ಅವಕಾಶವಿದ್ದು, ಬಳಿಕ ಅಪರಾಹ್ನ 2.30 ರಿಂದ ರಾತ್ರಿ 7.30ರವರೆಗೆ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ. ಅನ್ನಛತ್ರದಲ್ಲಿ ಅಪರಾಹ್ನ 2.30 ರವರೆಗೆ ಭೋಜನ ಪ್ರಸಾದದ ವ್ಯವಸ್ಥೆ ಇರಲಿದೆ.
ಬಳಿಕ ರಾತ್ರಿ 7.30 ರ ನಂತರ ಭೋಜನ ಪ್ರಸಾದದ ವ್ಯವಸ್ಥೆಯನ್ನು ಮಾಡಲಾಗುವುದು ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.