ಮಂಗಳೂರು

ಆದರ್ಶ ತತ್ವಕ್ಕೆ ಧರ್ಮಸ್ಥಳವೇ ಮಾದರಿ : ಡಾ. ಎಂ. ಆರ್. ವೆಂಕಟೇಶ್

ಧರ್ಮಸ್ಥಳ: ಲೋಕಸಂಗ್ರಹದಲ್ಲಿ ಮಾನಸಿಕ ಸಶಕ್ತಿಯ ದಾನಕ್ಕೆ ಮುನ್ನುಡಿ ಬರೆದ ಏಕೈಕ ಧಾರ್ಮಿಕ ಕ್ಷೇತ್ರ ಧರ್ಮಸ್ಥಳ ಎಂದು ಭಾರತದ ಸರ್ವೋಚ್ಚ ನ್ಯಾಯಾಲಯದ ನ್ಯಾಯವಾದಿಗಳು, ಲೇಖಕರು ಆದ ಡಾ.ಎಂ.ಆರ್.ವೆಂಕಟೇಶ್ ಅಭಿಪ್ರಾಯ ಪಟ್ಟರು.

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೆÇೀತ್ಸವದ ಸಂದರ್ಭದಲ್ಲಿ ಪೂಜ್ಯ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಸಮ್ಮುಖದಲ್ಲಿ ಸೋಮವಾರದಂದು ಜರುಗಿದ 91ನೇಯ ಸರ್ವಧರ್ಮ ಸಮ್ಮೇಳನದಲ್ಲಿ ‘ಆಧುನಿಕ ಭಾರತ ಧರ್ಮ ಸಮನ್ವಯತೆ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು.

ರಾಮಾಯಣದ ಸುಂದರಕಾಂಡದಲ್ಲಿ ಹನುಮಂತನು ತಾತ್ಕಾಲಿಕವಾಗಿ ಮಾನಸಿಕ ಸ್ಥೈರ್ಯವನ್ನು ಕಳೆದುಕೊಂಡಾಗ, ಆತನಿಗೆ ಸಾತ್ವಿಕ ಶಕ್ತಿಯಾಗಿ ನಿಂತಿದ್ದೇ ಸಕಾರಾತ್ಮಕ ಮಂಥನೆ. ಅಂತೆಯೇ, ಪ್ರಸ್ತುತ ಕಾಲಘಟ್ಟದಲ್ಲಿ ಮಾನಸಿಕ ದೌರ್ಬಲ್ಯಕ್ಕೆ ಒಳಗಾಗುತ್ತಿರುವ ಜನಮಾನಸಕ್ಕೆ ಆತ್ಮವಿಶ್ವಾಸವೆಂಬ ಶಕ್ತಿಯನ್ನು ಧರ್ಮದ ಮುಖಾಂತರ ನೀಡುತ್ತಿರುವ ಕ್ಷೇತ್ರವೇ ಧರ್ಮಸ್ಥಳವೆಂದು ಹೇಳಿದರು.

USESCO ಕೂಡ ಧರ್ಮಸ್ಥಳದ ಕಾರ್ಯಸ್ವರೂಪಿ ಮಾದರಿಯನ್ನು ಅಳವಡಿಸಿಕೊಂಡು ಪ್ರಗತಿಯನ್ನು ಹೊಂದಲಿ. ಶಿಬಿ ಚಕ್ರವರ್ತಿ ತನ್ನನ್ನೇ ಆಹಾರವನ್ನಾಗಿ ಅರ್ಪಿಸಿದಂತೆ, ಮನುನೀತಿ ಚೋಳನು ಆಡಳಿತದಲ್ಲಿ ನೀತಿಯೇ ಪರಮಧರ್ಮವೆಂಬಂತೆ ಧರ್ಮಸ್ಥಳದ ಧರ್ಮಮಾರ್ಗ ವಿಶ್ವಕ್ಕೆ ಆದರ್ಶವಾಗಿದೆ ಎಂದು ಹೇಳಿದರು.

ಅಧ್ಯಾತ್ಮ ಮತ್ತು ವಿಜ್ಞಾನ ಪರಸ್ಪರ ವಿರೋಧವಲ್ಲ. ಅಧ್ಯಾತ್ಮವಿಲ್ಲದೇ ವಿಜ್ಞಾನವಿರದು, ವಿಜ್ಞಾನವಿಲ್ಲದೇ ಅಧ್ಯಾತ್ಮವಿರದು. ಈ ಶತಮಾನದಲ್ಲಿ ವಿಜ್ಞಾನದ ಜೊತೆಗೆ ಅಧ್ಯಾತ್ಮವೂ ನಮ್ಮ ದೇಶಕ್ಕೆ ಆರ್ಥಿಕ ಸಬಲತೆಯನ್ನು ನೀಡಲಿ. ಭಾರತದ ಷಡ್ದರ್ಶನಗಳು ಈ ಪುಣ್ಯಭೂಮಿಯ ಬಹುತ್ವದಲ್ಲಿನ ವೈವಿಧ್ಯತೆಗೆ ಹಿಡಿದ ಕನ್ನಡಿಯಾಗಿದೆ. ಧರ್ಮವನ್ನು ಕಾರ್ಯರೂಪಕ್ಕೆ ತರುವಲ್ಲಿ ನಮ್ಮೆಲ್ಲರ ಸ್ವಧರ್ಮದ ಪಾತ್ರವೂ ಹಿರಿದಾಗಿದೆ ಎಂಬುದನ್ನು ಅರಿತು ಮುನ್ನಡೆಯೋಣ ಎಂದರು

ತುಮಕೂರಿನ ಶ್ರೀ ಕ್ಷೇತ್ರ ಸಿದ್ಧಗಂಗಾ ಮಠದ ಪೀಠಾಧಿಪತಿಗಳಾದ ಶ್ರೀ ಸಿದ್ಧಲಿಂಗ ಸ್ವಾಮಿಗಳು ಸರ್ವಧರ್ಮ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ಅಕಾಡೆಮಿ ಫಾರ್ ಕ್ರಿಯೇಟಿವ್ ಟೀಚಿಂಗ್ ಸಂಸ್ಥಾಪಕಾರಾದ ಡಾ.ಗುರುರಾಜ್ ಕರ್ಜಗಿ ಉದ್ಘಾಟಿಸಿದರು. ವಿಭು ಅಕಾಡೆಮಿಯ ಸಂಸ್ಥಾಪಕ ಮುಖ್ಯಸ್ಥರಾದ ಡಾ.ವಿ.ಬಿ. ಆರತಿ ಮತ್ತು ಶ್ರೀ ಮಹ್ಮದ್ ಗೌಸ್ ಹವಾಲ್ದಾರ ಸೇರಿದಂತೆ ಇತರೆ ಗಣ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Ramya Bolantoor

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

8 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

9 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

9 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

10 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

10 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

10 hours ago