News Karnataka Kannada
Friday, May 03 2024
ಮಂಗಳೂರು

ಬಿಲ್ಲು ಇಲ್ಲದೆ ಅಡಕೆ ಸಾಗಾಟ: ಧರ್ಮಸ್ಥಳ ಪೊಲೀಸರಿಂದ ವಾಹನ ವಶಕ್ಕೆ

Dharmasthala police seize vehicle for transporting arecanut without bill
Photo Credit : News Kannada

ಬೆಳ್ತಂಗಡಿ: ಸುಲಿದ ಒಣ ಅಡಕೆಯನ್ನು ವಾಣಿಜ್ಯ ತೆರಿಗೆ ಇಲಾಖೆಯ ಬಿಲ್ಲು ಇಲ್ಲದೆ ಸಾಗಾಟ ಮಾಡುತ್ತಿದ್ದಾಗ ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಅನಿಲ್ ಕುಮಾರ್ ತಂಡ ತಪಾಸಣೆ ವೇಳೆ ವಾಹನವನ್ನು ಪತ್ತೆ ಹಚ್ಚಿ ವಾಣಿಜ್ಯ ತೆರಿಗೆ ಇಲಾಖೆಗೆ ಹಸ್ತಾಂತರಿಸಿ ಅಡಕೆ ಮತ್ತು ವಾಹನಕ್ಕೆ ದಂಡ ವಿಧಿಸಿದ್ದಾರೆ.

ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅನಿಲ್ ಕುಮಾರ್ ಡಿ ಮತ್ತು ಸಿಬ್ಬಂದಿಗಳು ಕರ್ತವ್ಯದಲ್ಲಿರುವಾಗ ಜುಲೈ 12 ರಂದು ಬೆಳಗ್ಗೆ 11 ಗಂಟೆಗೆ ಮುಂಡಾಜೆ ಗ್ರಾಮದ ಪರಶುರಾಮ ರಾಮ ದೇವಸ್ಥಾನದ ಕ್ರಾಸ್ ಬಳಿ KA18C8521 ಸಂಖ್ಯೆಯ ಅಶೋಕ್ ಲೈಲಾಂಡ್ ಬಡಾದೋಸ್ತ್ ವಾಹನವನ್ನು ನಿಲ್ಲಿಸಿ ತಪಾಸಣೆ ನಡೆಸಿದಾಗ ಅದರೊಳಗೆ ಸುಲಿದ ಒಣ ಅಡಿಕೆ ಇದ್ದು ಇದರ ಚಾಲಕ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಇದ್ಗಾ ನಗರದ 15 ನೇ ವಾರ್ಡಿನ ನಜವಾಸಿ ಶಾಬೀರ್ ವಿಚಾರಿಸಿದಾಗ ಸುಳ್ಯದ ಅಡಕೆ ಅಂಗಡಿಯಿಂದ ಪಡೆದುಕೊಂಡು ಕಡೂರಿಗೆ ತೆಗೆದುಕೊಂಡು ಹೋಗುತ್ತಿರುವುದಾಗಿ ತಿಳಿಸಿದ್ದು. ಇದಕ್ಕೆ ಸಂಬಂಧಿಸಿದ ಬಿಲ್ಲು / ದಾಖಲಾತಿ ಕೇಳಿದಾಗ ಬಿರೂರು ಅಜ್ಜಂಪುರ ರಸ್ತೆಯಲ್ಲಿರುವ ನಿದಾ ಟ್ರೇಡರ್ಸ್ ಸಂಬಂಧಿಸಿದ ಚೀಟಿಗಳನ್ನು ಸಲ್ಲಿಸಿದ್ದು. ಬೇರೆ ಯಾವುದೇ ಬಿಲ್ಲುಗಳಿಲ್ಲ ಎಂದು ತಿಳಿಸಿದ್ದು. ವಾಹನ ,ಅಡಿಕೆ ಹಾಗೂ ಚಾಲಕನನ್ನು ಧರ್ಮಸ್ಥಳ ಪೊಲೀಸ್ ಠಾಣಾ ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮ ಕೈಗೊಳ್ಳಲು ವಾಣಿಜ್ಯ ತೆರಿಗೆ ಜಂಟಿ ಆಯುಕ್ತರು ಜಾರಿ, ಪಶ್ಚಿಮ ವಲಯ ಮಂಗಳೂರು ವರದಿ ನೀಡಿದ್ದು ಅದರಂತೆ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ 81,900 ರೂಪಾಯಿ ದಂಡ ವಿಧಿಸಲಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು