ಬೆಳ್ತಂಗಡಿ: ಸುಲಿದ ಒಣ ಅಡಕೆಯನ್ನು ವಾಣಿಜ್ಯ ತೆರಿಗೆ ಇಲಾಖೆಯ ಬಿಲ್ಲು ಇಲ್ಲದೆ ಸಾಗಾಟ ಮಾಡುತ್ತಿದ್ದಾಗ ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್ ತಂಡ ತಪಾಸಣೆ ವೇಳೆ ವಾಹನವನ್ನು ಪತ್ತೆ ಹಚ್ಚಿ ವಾಣಿಜ್ಯ ತೆರಿಗೆ ಇಲಾಖೆಗೆ ಹಸ್ತಾಂತರಿಸಿ ಅಡಕೆ ಮತ್ತು ವಾಹನಕ್ಕೆ ದಂಡ ವಿಧಿಸಿದ್ದಾರೆ.
ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್ ಡಿ ಮತ್ತು ಸಿಬ್ಬಂದಿಗಳು ಕರ್ತವ್ಯದಲ್ಲಿರುವಾಗ ಜುಲೈ 12 ರಂದು ಬೆಳಗ್ಗೆ 11 ಗಂಟೆಗೆ ಮುಂಡಾಜೆ ಗ್ರಾಮದ ಪರಶುರಾಮ ರಾಮ ದೇವಸ್ಥಾನದ ಕ್ರಾಸ್ ಬಳಿ KA18C8521 ಸಂಖ್ಯೆಯ ಅಶೋಕ್ ಲೈಲಾಂಡ್ ಬಡಾದೋಸ್ತ್ ವಾಹನವನ್ನು ನಿಲ್ಲಿಸಿ ತಪಾಸಣೆ ನಡೆಸಿದಾಗ ಅದರೊಳಗೆ ಸುಲಿದ ಒಣ ಅಡಿಕೆ ಇದ್ದು ಇದರ ಚಾಲಕ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಇದ್ಗಾ ನಗರದ 15 ನೇ ವಾರ್ಡಿನ ನಜವಾಸಿ ಶಾಬೀರ್ ವಿಚಾರಿಸಿದಾಗ ಸುಳ್ಯದ ಅಡಕೆ ಅಂಗಡಿಯಿಂದ ಪಡೆದುಕೊಂಡು ಕಡೂರಿಗೆ ತೆಗೆದುಕೊಂಡು ಹೋಗುತ್ತಿರುವುದಾಗಿ ತಿಳಿಸಿದ್ದು. ಇದಕ್ಕೆ ಸಂಬಂಧಿಸಿದ ಬಿಲ್ಲು / ದಾಖಲಾತಿ ಕೇಳಿದಾಗ ಬಿರೂರು ಅಜ್ಜಂಪುರ ರಸ್ತೆಯಲ್ಲಿರುವ ನಿದಾ ಟ್ರೇಡರ್ಸ್ ಸಂಬಂಧಿಸಿದ ಚೀಟಿಗಳನ್ನು ಸಲ್ಲಿಸಿದ್ದು. ಬೇರೆ ಯಾವುದೇ ಬಿಲ್ಲುಗಳಿಲ್ಲ ಎಂದು ತಿಳಿಸಿದ್ದು. ವಾಹನ ,ಅಡಿಕೆ ಹಾಗೂ ಚಾಲಕನನ್ನು ಧರ್ಮಸ್ಥಳ ಪೊಲೀಸ್ ಠಾಣಾ ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮ ಕೈಗೊಳ್ಳಲು ವಾಣಿಜ್ಯ ತೆರಿಗೆ ಜಂಟಿ ಆಯುಕ್ತರು ಜಾರಿ, ಪಶ್ಚಿಮ ವಲಯ ಮಂಗಳೂರು ವರದಿ ನೀಡಿದ್ದು ಅದರಂತೆ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ 81,900 ರೂಪಾಯಿ ದಂಡ ವಿಧಿಸಲಾಯಿತು.
ಪತಂಜಲಿಯ ನವರತ್ನ ಇಲೈಚಿ ಸೋನ್ ಪಾಪ್ಡಿ ಗುಣಮಟ್ಟದ ಪರೀಕ್ಷೆಯಲ್ಲಿ ವಿಫಲವಾದ ನಂತರ ಉತ್ತರಾಖಂಡದ ನ್ಯಾಯಾಲಯವು ಪತಂಜಲಿ ಅಧಿಕಾರಿ ಮತ್ತು ಇತರ…
ಕಸ್ಟಮ್ಸ್ ಅಧಿಕಾರಿಗಳು 1.96 ಕೋಟಿ ರೂ. ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ…
ಶನಿವಾರ ನಡೆದ ಹೈವೋಲ್ಟೇಜ್ ಆರ್ಸಿಬಿ ವರ್ಸಸ್ ಸಿಎಸ್ಕೆ ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಅತಿಕ್ರಮ ಪ್ರವೇಶ ಮಾಡುವುದಾಗಿ ವಿಡಿಯೋ ಪೋಸ್ಟ್…
ತೆರಿಗೆ ವಂಚನೆ ಮತ್ತು ಅಕ್ರಮ ಆಸ್ತಿ ಹೊಂದಿದ್ದ ಆರೋಪದ ಮೇಲೆ ಐಟಿ ಅಧಿಕಾರಿಗಳು ಆಗ್ರಾದಲ್ಲಿ ಶೂ ವ್ಯಾಪಾರಿ ರಾಮನಾಥ್ ಡಂಗ್…
ಐಪಿಎಲ್ ಬೆಟ್ಟಿಂಗ್ನಲ್ಲಿ ಲಕ್ಷ ಲಕ್ಷ ಹಣ ಕಳೆದುಕೊಂಡ ಯುವಕನೊಬ್ಬ ಲಾಡ್ಜ್ನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರಿನ…
ಉಡುಪಿಯ ಪ್ರತಿಷ್ಠಿತ ಜವಳಿ ಮಳಿಗೆ ‘ಗೀತಾಂಜಲಿ ಸಿಲ್ಕ್’ ಮತ್ತು ಶಾಂತಿಸಾಗರ್ ಹೊಟೇಲ್ನ ಸಂಸ್ಥಾಪಕರಾದ ನೀರೆ ಬೈಲೂರು ಗೋವಿಂದ ನಾಯಕ್ (89)…