ಮಂಗಳೂರು

ಧರ್ಮಸ್ಥಳ: ಶಾಸ್ತ್ರೋಕ್ತ ಕೆರೆಕಟ್ಟೆ ಉತ್ಸವ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥಸ್ವಾಮಿಯ ದೇವಳದ ಲಕ್ಷದೀಪೋತ್ಸವದ ಅಂಗವಾಗಿ ಎರಡನೇಯ ದಿನದ ರಾತ್ರಿ ಕೆರೆಕಟ್ಟೆ ಉತ್ಸವ ಧರ್ಮಾದಿಕಾರಿ ಡಾ. ಡಿ ವಿರೇಂದ್ರ ಹೆಗ್ಗಡೆ ಸಮ್ಮುಖದಲ್ಲಿ ನಡೆಯಿತು.

ಮೊದಲಿಗೆ ದೇವಸ್ಥಾನದ ಒಳಭಾಗದಲ್ಲಿ ಸಕಲ ಶಾಸ್ತ್ರಗಳೊಂದಿಗೆ ಪೂಜೆ ನಡೆಸಿ ಸಂಪ್ರದಾಯದಂತೆ ಜಾಗಟೆ, ಶಂಖ, ನಾದಸ್ವರ, ಡೋಲು, ಸಂಗೀತ ಮೂಲಕ ಹೂಗಳು ಮತ್ತು ಆಭರಣಗಳಿಂದ ಅಲಂಕೃತ ಪಲ್ಲಕ್ಕಿಯಲ್ಲಿ ದೇವರನ್ನು ಕೂರಿಸಿ 16 ಸುತ್ತು ಪ್ರದಕ್ಷಿಣೆ ಹಾಕಲಾಯಿತು. ನಂತರ ಆನೆ, ಬಸವ, ಪಂಜು, ಗೊಂಬೆಗಳ ಮೆರವಣಿಗೆಯ ಜೊತೆಗೆ ಸಹಸ್ರಾರು ಭಕ್ತರ ಜೊತೆಯಲ್ಲಿ ಪಲ್ಲಕ್ಕಿಯಲ್ಲಿ ಕೆರೆ ಸುತ್ತ 5 ಸುತ್ತು ಪ್ರದಕ್ಷಿಣೆಯನ್ನು ವಿಶೇಷ ವಾದ್ಯಗಳ ಮೂಲಕ ನಡೆಸಲಾಯಿತು.

ನಂತರ ದೇವರನ್ನು ಕೆರೆಕಟ್ಟೆಯಲ್ಲಿ ಕೂರಿಸಿ ಸಂಗೀತ, ನಾದಸ್ವರ ಮೂಲಕ ದೇವರಿಗೆ ಪೂಜೆ ಸಲ್ಲಿಸಲಾಯಿತು. ದಾರಿಯುದ್ದಕ್ಕೂ ನಡೆದ ಮಂತ್ರಪಠಣ, ಶಂಖ ಜಾಗಟೆಗಳ ನಾದ ಅಲ್ಲಿ ನೆರೆದಿರುವ ಭಕ್ತ ಸಮೂಹದೊಳಗೆ ಭಕ್ತಿಭಾವ ಮೂಡಿಸಿತು. ಭಕ್ತರು ಭಕ್ತಿಯಿಂದ ದೀಪ ಹಚ್ಚುತ್ತಿದ್ದದ್ದು ಮತ್ತು ಭಜನೆಗಳು ಅಲ್ಲಿದ್ದವರನ್ನು ಭಕ್ತಿಪರವಶವರನ್ನಾಗಿಸಿತ್ತು.

ಇದಾದ ನಂತರ ದೇವರನ್ನು ರಥದೆಡೆಗೆ ಮಾನವ ಸರಪಳಿ ಮೂಲಕ ಕರೆತರಲಾಯಿತು. ಈ ಸಂದರ್ಭದಲ್ಲಿ ಪೋಲೀಸ್ ಇಲಾಖೆ ಮತ್ತು ದೇವಸ್ಥಾನ ಸಿಬ್ಬಂದಿಗಳ ಪ್ರಯತ್ನ ಉತ್ಸವಕ್ಕೆ ತೊಂದರೆಯಾಗದಂತೆ ನೋಡಿಕೊಂಡಿತು. ಬಳಿಕ ದೇವರನ್ನು ಬೆಳ್ಳಿರಥದಲ್ಲಿ ಕೂರಿಸಿ ಮಂಗಳಾರತಿ ಮಾಡಿ, ದೇವಸ್ಥಾನಕ್ಕೆ ಒಂದು ಸುತ್ತಿನ ಪ್ರದಕ್ಷಿಣೆಯ ನಂತರ ಮತ್ತೆ ದೇವಳದ ಒಳಕ್ಕೆ ಕರೆತರಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತ ವರ್ಗದ ಪ್ರಮುಖರು, ವೈದಿಕ ಸಮಿತಿಯವರು, ಮತ್ತು ಸಹಸ್ರಾರು ಭಕ್ತರು ಉಪಸ್ಥಿತರಿದ್ದರು.

 

ವರದಿ-ಚಿತ್ರಗಳು:

ಅರ್ಪಿತ್ ಇಚ್ಚೆ
ಸ್ನಾತಕೊತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
ಎಸ್.ಡಿ.ಎಂ ಕಾಲೇಜು, ಉಜಿರೆ

Ashika S

Recent Posts

ಸ್ವಾತಿ ಮಲಿವಾಲ್‌ ಮೇಲೆ ದೂರು ದಾಖಲಿಸಿದ ಆರೋಪಿ ಬಿಭವ್‌

ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್‌ ಕುಮಾರ್‌ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…

4 mins ago

ತಾಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿವ್ಯವಸ್ಥೆ ಪರಿಶೀಲಿಸಿದ ಡಿವೈಎಸ್ಪಿ

ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ…

20 mins ago

ಪವಿತ್ರಾ ಜಯರಾಂ ಮೃತಪಟ್ಟ ಬೆನ್ನಲ್ಲೇ ನಟ ಚಂದು ಆತ್ಮಹತ್ಯೆ

ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ  ತೆಲುಗು ಧಾರಾವಾಹಿ ನಟ…

32 mins ago

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

8 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

9 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

9 hours ago