ಬೆಳ್ತಂಗಡಿ: ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಅಶಕ್ತ ದುರ್ಬಲ ವರ್ಗದವರಿಗೆ ಸಹಾಯ ಧನ ವಿತರಣಾ ಕಾರ್ಯಕ್ರಮ ಶನಿವಾರ ಅಳದಂಗಡಿ ಹಾಲು ಉತ್ಪಾದಕ ಸಹಕಾರ ಸಂಘದ ಸಭಾ ಭವನದಲ್ಲಿ ನಡೆಯಿತು.
ಬಡಗಕಾರಂದೂರು, ಬಳಂಜ, ಕುದ್ಯಾಡಿ, ಪಿಲ್ಯ, ತೆಂಕಕಾರಂದೂರು, ನಾವರ, ಹಾಗೂ ನಾಲ್ಕೂರು ಗ್ರಾಮದ 79 ಮಂದಿ ಅಶಕ್ತರಿಗೆ ಸಂಘದ ವತಿಯಿಂದ ನೀಡಲಾದ ತಲಾ ರೂ.5000/ ದ ಧನಾದೇಶವನ್ನು ಶಾಸಕ ಹರೀಶ ಪೂಂಜ ಹಸ್ತಾಂತರಿಸಿದರು.
ಬಳಿಕ ಮಾತನಾಡಿದ ಶಾಸಕರು ಅಮೃತಮಹೋತ್ಸವ ಸ್ಮರಣೀಯವಾಗಬೇಕು ಮತ್ತು ಪ್ರೇರಣಾದಾಯಿಯಾಗಿರಬೇಕು ಎಂಬ ಉದ್ದೇಶದಿಂದ ತಾಲೂಕಿನಲ್ಲಿ ಹಲವಾರು ಕಾರ್ಯಕ್ರಮಗಳನ್ನು ಇಟ್ಟುಕೊಳ್ಳಲಾಗಿದೆ. ಅಳದಂಗಡಿ ಸಹಕಾರಿ ಸಂಘದವರ ಇಂದಿನ ಕಾರ್ಯ ಎಲ್ಲರಿಗೂ ಮಾದರಿ. ಅಶಕ್ತರ ಮುಂದಿನ ಉತ್ತಮ ಬದುಕಿಗೆ ಸಹಕಾರಿಯಾಗಲಿ ಎಂದರು.
ಸಂಘದ ಅಧ್ಯಕ್ಷ ಶಿವ ಭಟ್ ಕಟ್ಟೂರು ಅಧ್ಯಕ್ಷತೆ ವಹಿಸಿದ್ದರು. ಹಾಲು.ಉ.ಸ.ಸಂಘದ ಅಧ್ಯಕ್ಷ ಗಣೇಶ್, ನಿರ್ದೇಶಕರುಗಳು ಉಪಸ್ಥಿತರಿದ್ದರು.
ಈಚೆಗೆ ನಿಧನರಾದ ಅಳದಂಗಡಿ ಚರ್ಚ್ನಲ್ಲಿ ಧರ್ಮಗುರುಗಳಾಗಿದ್ದ ಬೆಂಜಮಿನ್ ಡಿ ಸೋಜ ಅವರಿಗೆ ಮೌನನಮನ ಸಲ್ಲಿಸಲಾಯಿತು.
ಉಪಾಧ್ಯಕ್ಷ ಸದಾನಂದ ಪೂಜಾರಿ ಸ್ವಾಗತಿಸಿದರು. ಕಾರ್ಯನಿರ್ವಹಣಾಧಿಕಾರಿ ಮೀರಾ ಫಲಾನುಭವಿಗಳ ವಿವರ ನೀಡಿದರು. ಗುಮಾಸ್ತ ಸಂತೋಷ್ ಕಾರ್ಯಕ್ರಮ ನಿರ್ವಹಿಸಿದರು.ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಅಶಕ್ತ ದುರ್ಬಲ ವರ್ಗದವರಿಗೆ ಸಹಾಯ ಧನ ವಿತರಣಾ ಕಾರ್ಯಕ್ರಮ ಶನಿವಾರ ಅಳದಂಗಡಿ ಹಾಲು ಉತ್ಪಾದಕ ಸಹಕಾರ ಸಂಘದ ಸಭಾ ಭವನದಲ್ಲಿ ನಡೆಯಿತು.
ಬಡಗಕಾರಂದೂರು, ಬಳಂಜ, ಕುದ್ಯಾಡಿ, ಪಿಲ್ಯ, ತೆಂಕಕಾರಂದೂರು, ನಾವರ, ಹಾಗೂ ನಾಲ್ಕೂರು ಗ್ರಾಮದ 79 ಮಂದಿ ಅಶಕ್ತರಿಗೆ ಸಂಘದ ವತಿಯಿಂದ ನೀಡಲಾದ ತಲಾ ರೂ.5000/ ದ ಧನಾದೇಶವನ್ನು ಶಾಸಕ ಹರೀಶ ಪೂಂಜ ಹಸ್ತಾಂತರಿಸಿದರು.
ಬಳಿಕ ಮಾತನಾಡಿದ ಶಾಸಕರು ಅಮೃತಮಹೋತ್ಸವ ಸ್ಮರಣೀಯವಾಗಬೇಕು ಮತ್ತು ಪ್ರೇರಣಾದಾಯಿಯಾಗಿರಬೇಕು ಎಂಬ ಉದ್ದೇಶದಿಂದ ತಾಲೂಕಿನಲ್ಲಿ ಹಲವಾರು ಕಾರ್ಯಕ್ರಮಗಳನ್ನು ಇಟ್ಟುಕೊಳ್ಳಲಾಗಿದೆ. ಅಳದಂಗಡಿ ಸಹಕಾರಿ ಸಂಘದವರ ಇಂದಿನ ಕಾರ್ಯ ಎಲ್ಲರಿಗೂ ಮಾದರಿ. ಅಶಕ್ತರ ಮುಂದಿನ ಉತ್ತಮ ಬದುಕಿಗೆ ಸಹಕಾರಿಯಾಗಲಿ ಎಂದರು.
ಸಂಘದ ಅಧ್ಯಕ್ಷ ಶಿವ ಭಟ್ ಕಟ್ಟೂರು ಅಧ್ಯಕ್ಷತೆ ವಹಿಸಿದ್ದರು. ಹಾಲು.ಉ.ಸ.ಸಂಘದ ಅಧ್ಯಕ್ಷ ಗಣೇಶ್, ನಿರ್ದೇಶಕರುಗಳು ಉಪಸ್ಥಿತರಿದ್ದರು.
ಈಚೆಗೆ ನಿಧನರಾದ ಅಳದಂಗಡಿ ಚರ್ಚ್ನಲ್ಲಿ ಧರ್ಮಗುರುಗಳಾಗಿದ್ದ ಬೆಂಜಮಿನ್ ಡಿ ಸೋಜ ಅವರಿಗೆ ಮೌನನಮನ ಸಲ್ಲಿಸಲಾಯಿತು.
ಉಪಾಧ್ಯಕ್ಷ ಸದಾನಂದ ಪೂಜಾರಿ ಸ್ವಾಗತಿಸಿದರು. ಕಾರ್ಯನಿರ್ವಹಣಾಧಿಕಾರಿ ಮೀರಾ ಫಲಾನುಭವಿಗಳ ವಿವರ ನೀಡಿದರು. ಗುಮಾಸ್ತ ಸಂತೋಷ್ ಕಾರ್ಯಕ್ರಮ ನಿರ್ವಹಿಸಿದರು.
ಆಮ್ ಆದ್ಮಿ ಪಕ್ಷಕ್ಕೆ ವಿದೇಶಿ ಮೂಲಗಳಿಂದ 7 ಕೋಟಿ ರೂ.ಗೂ ಹೆಚ್ಚು ದೇಣಿಗೆ ಸಿಕ್ಕಿರುವ ಬಗ್ಗೆ ಎಫ್ಸಿಆರ್ಎ ತನಿಖೆಯನ್ನು ಕೋರಿ…
ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗ…
ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ…
ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…
ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…
ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…