Categories: ಮಂಗಳೂರು

ಸಾಹಿತ್ಯ ಶಿಬಿರಗಳಿಂದ ಸದಭಿರುಚಿಯ ಪ್ರಸರಣ: ಡಾ. ಹೇಮಾವತಿ ವಿ.ಹೆಗ್ಗಡೆ

ಉಜಿರೆ: ಸಾಹಿತ್ಯದ ವಿವಿಧ ಆಯಾಮಗಳನ್ನು ಪರಿಚಯಿಸುವಂಥ ಶಿಬಿರಗಳು ಯುವಸಮೂಹದಲ್ಲಿ ಸದಭಿರುಚಿ ನೆಲೆಗೊಳಿಸುವುದರೊಂದಿಗೆ ಭಾಷೆ ಮತ್ತು ಸಂಸ್ಕೃತಿಯ ಕುರಿತ ಕಾಳಜಿಯನ್ನು ವ್ಯಾಪಕಗೊಳಿಸುತ್ತವೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ.ಹೇಮಾವತಿ ವಿ.ಹೆಗ್ಗಡೆ ಅವರು ಅಭಿಪ್ರಾಯಪಟ್ಟರು.

ಎಸ್.ಡಿ.ಎಂ ಕಾಲೇಜಿನ ಕನ್ನಡ ಸಂಘ ಹಾಗೂ ಹೆಗ್ಗೋಡಿನ ನೀನಾಸಂ ಪ್ರತಿಷ್ಠಾನ ಸಹಯೋಗದೊಂದಿಗೆ ೨೫ನೇ ಸಾಹಿತ್ಯ ಅಧ್ಯಯನ ಶಿಬಿರದ ರಜತ ಸಂಭ್ರಮದ ಪ್ರಯುಕ್ತ ಆಯೋಜಿತವಾದ ಎರಡು ದಿನಗಳ “ಕಲಾನುಸಂಧಾನ ಶಿಬಿರ”ವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.

ಒಂದು ಪುಸ್ತಕವನ್ನು ಅರ್ಥೈಸಿಕೊಳ್ಳುವುದಕ್ಕೆ ವಿಮರ್ಶೆ ನೆರವಾಗುತ್ತದೆ. ಚಿಂತಕರು, ವಿಮರ್ಶಕರು ಸಾಹಿತ್ಯದ ವಿವಿಧ ಮಗ್ಗಲುಗಳನ್ನು ಪರಿಚಯಿಸುತ್ತಾರೆ. ಇದರೊಂದಿಗೆ ಓದಿನ ಸಾಮರ್ಥ್ಯದ ಸಾಧ್ಯತೆಗಳನ್ನು ವಿಸ್ತರಿಸುವ ಒಳನೋಟಗಳನ್ನೂ ಕಟ್ಟಿಕೊಡುತ್ತಾರೆ. ಸಾಹಿತ್ಯ ಅಧ್ಯಯನದ ಶಿಬಿರಗಳು ಈ ನಿಟ್ಟಿನಲ್ಲಿ ಮಹತ್ವಪೂರ್ಣ ಕೊಡುಗೆಗಳನ್ನು ನೀಡುತ್ತವೆ ಎಂದರು.

ಸಾಹಿತ್ಯ ಎನ್ನುವುದು ನಮ್ಮ ಭಾವನೆಗಳ ಬೆಳವಣಿಗೆಗೆ ಸಾವಯವ ಇದ್ದಹಾಗೆ. ಕಾವ್ಯ, ಕಥೆ, ಕಾದಂಬರಿಗಳ ವಿಮರ್ಶೆಯು ಸರಿಯಾದ ಅರ್ಥಗಳನ್ನು ಹೊಳೆಸುತ್ತದೆ. ನೀನಾಸಂ ಸಂಸ್ಥೆಯೊಂದಿಗೆ ಎಸ್.ಡಿ.ಎಂ ಕಾಲೇಜು ಆಯೋಜಿಸುವ ಶಿಬಿರವು ವಿದ್ಯಾರ್ಥಿಗಳೊಳಗೆ ಸಾಹಿತ್ಯ ಮತ್ತು ಸಂಸ್ಕೃತಿಯ ಪ್ರಜ್ಞೆಯನ್ನು ಮೂಡಿಸಿದೆ. ಈ ಬಗೆಯ ಪ್ರಯತ್ನಗಳು ಮುಂದುವರೆಯಲಿ ಎಂದು ಆಶಿಸಿದರು.

ರಾಮಾಯಣ, ಮಹಾಭಾರತದಂಥಹ ಕಥನಗಳಿಗೆ ಸಮಕಾಲೀನ ಜೀವಂತಿಕೆಯನ್ನು ತಂದುಕೊಟ್ಟವರು ನಾಟಕಕಾರರು ಮತ್ತು ಅವರ ನಾಟಕಗಳನ್ನು ಪ್ರದರ್ಶನದ ಮೂಲಕ ಜನರಿಗೆ ತಲುಪಿಸುವ ಕಲಾವಿದರು.

ಯಕ್ಷಗಾನ, ತಾಳಮದ್ದಲೆ ಕಲಾವಿದರೂ ಈ ಕಥನಗಳ ಜೀವಂತಿಕೆಯನ್ನು ಹೆಚ್ಚಿಸಿದ್ದಾರೆ. ಇವುಗಳ ಕುರಿತು ವಿಸ್ತೃತ ಜ್ಞಾನ ಪಡೆಯುವುದಕ್ಕೆ ಶಿಬಿರಗಳು ನೆರವಾಗುತ್ತವೆ ಎಂದು ನುಡಿದರು.

ಮುಖ್ಯ ಅತಿಥಿಯಾಗಿ ಮಾತನಾಡಿದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್ ಕಾಲೇಜಿನ ಸಾಹಿತ್ಯಕ ಮತ್ತು ಸಾಂಸ್ಕೃತಿಕ ಬದ್ಧತೆಯ ಬಗ್ಗೆ ಪ್ರಸ್ತಾಪಿಸಿದರು. ಕಳೆದ ೨೫ ವರ್ಷಗಳಿಂದ ನೀನಾಸಂ ಸಂಸ್ಥೆಯ ಒಡಂಬಡಿಕೆಯೊಂದಿಗೆ  ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯು ಸಾಹಿತ್ಯ, ಸಂಸ್ಕೃತಿ ಕುರಿತು ಮೌಲಿಕ ಚಂತನೆಗಳಿಗೆ ವೇದಿಕೆ ಕಲ್ಪಿಸಿಕೊಡುವ ಶಿಬಿರವನ್ನು
ನಡೆಸಿಕೊಂಡು ಬಂದಿದೆ ಎಂದರು.

ತಾಂತ್ರಿಕತೆಯ ಪ್ರಭಾವಳಿಯ ನಡುವೆಯೂ ಪುಸ್ತಕಗಳನ್ನು ಓದುವ ಅಭಿರುಚಿಯನ್ನು ಮೂಡಿಸುವಲ್ಲಿ ಈ ಶಿಬಿರಗಳ ಪಾತ್ರ ಹಿರಿದು ಎಂದು ಹೇಳಿದರು.

ಎಸ್.ಡಿ.ಎಂ ಕಾಲೇಜಿನ ವಿಶ್ರಾಂತ ಕುಲಸಚಿವರಾದ ಡಾ.ಬಿ.ಪಿ.ಸಂಪತ್ ಕುಮಾರ್ ಅವರು ನೀನಾಸಂ ಸಂಸ್ಥೆಯೊಂದಿಗೆ
ಎಸ್.ಡಿ.ಎಂ ಕಾಲೇಜು ಕಳೆದ ೨೪ ವರ್ಷಗಳಿಂದ ಆಯೋಜಿಸುತ್ತಿರುವ ವಾರ್ಷಿಕ ಅಧ್ಯಯನ ಶಿಬಿರದ ಮೌಲಿಕ ಚಿಂತನೆಯ ವಿಶೇಷತೆಗಳನ್ನು ನೆನಪಿಸಿಕೊಂಡರು.

ಪ್ರತಿವರ್ಷದ ಶಿಬಿರಗಳ ಮೂಲಕ ಕನ್ನಡದ ಮಹತ್ವದ ಲೇಖಕರ ಕೃತಿಗಳನ್ನು ವಿದ್ಯಾರ್ಥಿಗಳಿಗೆ ತಲುಪಿಸುವ ಪ್ರಯತ್ನವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ.ಬಿ.ಎ.ಕುಮಾರ ಹೆಗ್ಡೆ ವಿದ್ಯಾರ್ಥಿಗಳು ಸಾಹಿತ್ಯ, ಸಂಸ್ಕೃತಿ ಕುರಿತ ಶಿಬಿರಗಳಲ್ಲಿ ಪಾಲ್ಗೊಂಡು ತಮ್ಮ ತಿಳುವಳಿಕೆಯನ್ನು ವಿಸ್ತರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಖ್ಯಾತ ಕಥೆಗಾರರಾದ ವಸುಧೇಂದ್ರ ಉಪಸ್ಥಿತರಿದ್ದರು. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪ್ರೋ.ಟಿ.ಪಿ.ಅಶೋಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಬೋಜಮ್ಮ ಕೆ.ಎನ್. ಸ್ವಾಗತಿಸಿದರು.

ಸಹಾಯಕ ಪ್ರಾಧ್ಯಾಪಕರಾದ ಡಾ.ದಿವಾಕರ ಕೆ ಕಾರ್ಯಕ್ರಮ ನಿರೂಪಿಸಿದರು. ಜಯಶ್ರೀ ವಂದಿಸಿದರು.

Sneha Gowda

Recent Posts

ಬೆಂಗಾವಲು ಪಡೆಯ ವಾಹನದ ಮೇಲೆ ಭಯೋತ್ಪಾದಕರ ದಾಳಿ: ಐವರು ಅಧಿಕಾರಿಗಳಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು (ಶನಿವಾರ) ಭಾರತೀಯ ವಾಯುಪಡೆ ಬೆಂಗಾವಲು ಪಡೆ ವಾಹನದ ಮೇಲೆ ಭಯೋತ್ಪಾದಕರು ದಾಳಿ…

19 mins ago

ಬಿ.ವೈ ರಾಘವೇಂದ್ರ ಪರ ಮತಯಾಚನೆ ನಡೆಸಿದ ವೇದವ್ಯಾಸ್ ಕಾಮತ್

ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್…

31 mins ago

ಜಾತಿಗಿಂತ‌ ದೇಶದ ಹಿತ‌ ಮುಖ್ಯ: ವಿಜಯ್ ಜೋಶಿ ಮನವಿ

ಕಳೆದ 25 ವರ್ಷಗಳಿಂದ ವಿಜಯಪುರ ಜಿಲ್ಲೆಯ ಪ್ರಬುದ್ಧ ಮತದಾರರು ಯಾವುದೇ ಜಾತಿ, ಮತ, ಪಂಥ ನೋಡದೇ ಜಾತಿಗಿಂತ ದೇಶದ ಹಿತವೇ…

2 hours ago

ಪ್ರತಿ ಬೂತ್ ನಲ್ಲಿ ಬಿಜೆಪಿ ಪರ ಅಲೆ, ಕಾರ್ಯಕರ್ತರಲ್ಲಿ ಅತ್ಯುತ್ಸಾಹ : ಪ್ರಕಾಶ ಅಕ್ಕಲಕೋಟ.

ವಿಜಯಪುರ ಲೋಕಸಭಾ ಕ್ಷೇತ್ರದ ಪ್ರತಿಯೊಂದು ಬೂತ್ ಗಳಲ್ಲಿ ಬಿಜೆಪಿ‌ ಪರ ಉತ್ತಮ ವಾತಾವರಣ ಸೃಷ್ಟಿಯಾಗಿದ್ದು, ಬಿಜೆಪಿ ಪರ‌ ಅಲೆ‌ ಇದೆ…

2 hours ago

ಮೃಣಾಲ್‌ ಹೆಬ್ಬಾಳ್ಕರ್ ಪರ ಹಣ ಹಂಚಿಕೆ ಆರೋಪ: ಐವರ ಬಂಧನ

ಬೆಳಗಾವಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳ್ಕರ್ ಪರ ಹಣ ಹಂಚಿಕೆ ಆರೋಪದಲ್ಲಿ ಹಣದ ಸಮೇತ ನಾಲ್ವರು ಸಿಕ್ಕಿಬಿದ್ದ ಘಟನೆ…

2 hours ago

ಬಿಜೆಪಿ ಸುಳ್ಳು ಇನ್ನು ನಡೆಯಲ್ಲ: ಲಕ್ಷ್ಮಣ ಸವದಿ ವಾಗ್ದಾಳಿ

ಮೋದಿ ಮತ್ತವರ ಬಳಗ ಮತ್ತು ಬಿಜೆಪಿಯವರ ಸುಳ್ಳುಗಳನ್ನು ಜನ ಅರಿತಿದ್ದು, ಈ ಸಲ ಸರಿಯಾಗಿ ಪಾಠ ಕಲಿಸಲಿದ್ದಾರೆ ಎಂದು ಮಾಜಿ…

2 hours ago