Categories: ಮಂಗಳೂರು

ಮಂಗಳೂರು: ಹಿರಿಯ ನಿವಾಸಿಗಳಿಗೆ ಶ್ರವಣ ದೋಷ ನಿವಾರಕ ಯಂತ್ರೋಪಕರಣ ವಿತರಣೆ

ಮಂಗಳೂರು: ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆ ಹಾಗೂ ರೋಟರೀ ಮಂಗಳೂರು ಸಿಟಿ ಸಂಸ್ಥೆ ಜಂಟಿ ಆಶ್ರಯದಲ್ಲಿ ಮೇ 07ರ ಇಂದು ನಗರದ ಮರೋಳಿ ಪ್ರದೇಶದಲ್ಲಿ ಕಾರ್ಯಾಚರಿಸುತ್ತಿರುವ ಲಿಟ್ಸ್ ಸಿಸ್ಟರ್ಸ್ ಆಫ್ ದಿ ಪೂವರ್ ಹಾಗೂ ಹೋಮ್ ಫಾರ್ ದಿ ಏಜೆಡ್ ಸಂಸ್ಥೆಯ ಸಭಾಂಗಣದಲ್ಲಿ ಸಂಸ್ಥೆಯ ನಿವಾಸಿಗಳಿಗಾಗಿ “ಶ್ರವಣ ಧ್ವನಿ ದೋಷ ನಿವಾರಕ ಯಂತ್ರೋಪಕರಣ” ಉಚಿತವಾಗಿ ದಾನದ ರೂಪದಲ್ಲಿ ನೀಡುವ ಕಾರ್ಯಕ್ರಮ ನಡೆಯಿತು.

ರೋಟರಿ ಜಿಲ್ಲಾ ಗವರ್ನರಾದ ರೋ। ಹೆಚ್.ಆರ್. ಕೇಶವ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಸಮಾಜದ ಮೂಲಭೂತ ಸೌಲಭ್ಯಗಳಿಗೆ ಸ್ಪಂದಿಸಿ ನಿಸ್ವಾರ್ಥ ಸೇವಾ ಮನೋಭಾವದಿಂದ ಸೇವೆ ನೀಡುವ ರೋಟರಿ ಸಂಸ್ಥೆಯ ಸಮಾಜ ಸೇವೆ ಶ್ಲಾಘನೀಯ ಎಂದು ನುಡಿದು 16 ಹಿರಿಯ ನಿವಾಸಿಗಳಿಗೆ ಶ್ರವಣ ದೋಷ ನಿವಾರಕ ಯಂತ್ರೋಪಕಣವನ್ನು ಹಸ್ತಾಂತರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೋಟರಿ ಸಂಸ್ಥೆಯ ಅಧ್ಯಕ್ಷ ರೋ। ಪ್ರಶಾಂತ್ ರೈ ಅವರು ಈ ಉಚಿತ ದಾನದ ರೂಪದ ಕಾರ್ಯಕ್ರಮವು ನಮ್ಮ ಸಂಸ್ಥೆಯ ಸಮಾಜ ಸೇವಾ ಯೋಜನೆಯ ಅಂಗವಾಗಿ ಆಯೋಜಿಸಲಾಗಿದೆ ಎಂದು ನುಡಿದು ಇದರ ಒಟ್ಟು ಮೌಲ್ಯ ಸುಮಾರು 02.00 ಲಕ್ಷ ಎಂದು ಮಾಹಿತಿ ನೀಡಿದರು. ಲಿಟ್ಸ್ ಸಿಸ್ಟರ್ ಆಫ್ ದಿ ಪೂವರ್ ಸಂಸ್ಥೆಯ ಮುಖ್ಯಸ್ಥೆಯಾದ ಮಾತೆ ಥೋಮಸಿನ್ ಮರಿಯಾ ಸ್ವಾಗತಿಸಿದರು.

ಭಾರತೀಯ ವೈದ್ಯಕೀಯ ಸಂಘದ ನಿಯೋಜಿತ ಅಧ್ಯಕ್ಷೆ ಡಾ| ಶ್ರೀಮತಿ ಜೆಸ್ಸಿ ಡಿಸೋಜ ವಂದಿಸಿದರು. ವೇದಿಕೆಯಲ್ಲಿ ರೋಟರಿ ಜಿಲ್ಲಾ ಸಹಾಯಕ ಗವರ್ನರಾದ ರೋ। ಪಿ.ಡಿ. ಶೆಟ್ಟಿ, ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷರಾದ ಡಾ| ರಂಜನ್, ಕಾರ್ಯದರ್ಶಿಯವರಾದ ಡಾ| ಅವಿನ್ ಆಳ್ವ ಮತ್ತು ರೋಟರಿ ಸಂಸ್ಥೆಯ ಕಾರ್ಯದರ್ಶಿಯಾದ ಗಣೇಶ್‌ರವರು ಉಪಸ್ಥಿತರಿದ್ದರು.

Chaitra Kulal

Recent Posts

ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್.ಐ.ಆರ್ ದಾಖಲು

ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್‌ ಪೂಂಜಾ  ಮೇಲೆ ಎಫ್‌ಐಆರ್‌ ದಾಖಲಾಗಿದೆ.ಶಾಸಕರು ತನ್ನ…

2 mins ago

ಬೈಕಿಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು

ಕಾರು ​​ ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್​ ಮಾಡಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

20 mins ago

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

38 mins ago

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

54 mins ago

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ : ಪರಿಚಯಸ್ಥರಿಂದಲೇ ಕೊಲೆ ಶಂಕೆ

ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…

1 hour ago

ಬಿಜೆಪಿ ಈಗ ಬೆಳೆದು ನಿಂತಿದೆ ಅದಕ್ಕೆ ಆರ್ ಎಸ್ ಎಸ್ ಬೆಂಬಲ ಬೇಕಾಗಿಲ್ಲ: ಉದ್ಧವ್ ಠಾಕ್ರೆ

ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…

1 hour ago