Categories: ಮಂಗಳೂರು

ಬೆಳ್ತಂಗಡಿ: ಆದರ್ಶ ಸೇವಾ ಸಮಿತಿ ವತಿಯಿಂದ ಪ್ರೋತ್ಸಾಹಧನ ವಿತರಣೆ ಮತ್ತು ಪ್ರತಿಭಾ ಪುರಸ್ಕಾರ

ಬೆಳ್ತಂಗಡಿ: ನಮ್ಮದು ಸಾಮರಸ್ಯದ ಬದುಕಾಗಬೇಕು. ಮುಂದಿನ ಯುವ ಜನಾಂಗ ಸಮಾಜ ಮತ್ತು ರಾಷ್ಟ್ರಕ್ಕೆ ಪೂರಕವಾಗಿ ಬದುಕುತ್ತೇನೆಂಬ ಸಂಕಲ್ಪ ಮಾಡಬೇಕಾಗಿದೆ. ನಾವು ಇನ್ನೊ ಬ್ಬರಿಗೆ ಉಪಕಾರ ಮಾಡದಿದ್ದರೂ ಉಪದ್ರ ಮಾಡಬಾರದು ಎಂದು ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾದ್ಯಾಪಕ ಡಾ. ರವಿ ಎಂ. ಎನ್. ನುಡಿದರು.

ಅವರು ಆ. 21 ರಂದು ಉಜಿರೆ ಶ್ರೀ ಶಾರದಾ ಮಂಟಪದಲ್ಲಿ ಉಜಿರೆ ರಾಮನಗರದ ಆದರ್ಶ ಸೇವಾ ಸಮಿತಿ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ ಹಾಗು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು.

ಅವರು ತಾಲೂಕಿನ ಪಿ. ಯು .ಸಿ,ಪದವಿ, ಸ್ನಾತಕೋತ್ತರ ಪದವಿ ಹಾಗು ಇತರ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಪ್ರತಿಭಾನ್ವಿತ 90ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ರೂ . 1.50 ಲಕ್ಷ ಮೊತ್ತದ ಪ್ರೋತ್ಸಾಹಧನ ವಿತರಿಸಿದರು. ಅಳದಂಗಡಿ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ. ಅವರು ತಾವು ಸಂಸ್ಥೆಯಿಂದ ಪಡೆದ ಪ್ರೋತ್ಸಾಹಧನವನ್ನು ವಿದ್ಯಾರ್ಥಿಗಳು ಮರೆಯದೆ ಉದ್ಯೋಗಕ್ಕೆ ಸೇರಿದ ಬಳಿಕ ತಮ್ಮ ಸಂಪಾದನೆಯ ಭಾಗವನ್ನು ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹವಾಗಿ ನೆರವಾಗುವ ಮೂಲಕ ಸಮಾಜದ ಋಣ ತೀರಿಸಬೇಕು ಎಂದರು.

ನಿರ್ದೇಶಕರಾದ ಶಿವಕಾಂತ ಗೌಡ ಮತ್ತು ಅಪರ್ಣ ದಂಪತಿಗಳನ್ನು ಸಮ್ಮಾನಿಸಲಾಯಿತು . ಪಟ್ಟೂರು ಶ್ರೀ ರಾಮ ಶಾಲೆಗೆ ಆದರ್ಶ ಸೇವಾ ಸಮಿತಿ ವತಿಯಿಂದ ರೂ 10,000 ಆರ್ಥಿಕ ನೆರವು ನೀಡಲಾಯಿತು. ಆದರ್ಶ ಸೇವಾ ಸಮಿತಿ ಅಧ್ಯಕ್ಷ ರಮೇಶ್ ಪ್ರಭು ಅಧ್ಯಕ್ಷತೆ ವಹಿಸಿ , ಸ್ವಾಗತಿಸಿದರು. ಕಾರ್ಯದರ್ಶಿ ಜಯಂತ ಶೆಟ್ಟಿ ಕುಂಟಿನಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ನಿರ್ದೇಶಕ ಚಂದ್ರಶೇಖರ್ ವರದಿ ಮಂಡಿಸಿ,ರಾಮದಾಸ್ ಭಂಡಾರ್ಕರ್ ಪ್ರತಿಭಾನ್ವಿತ ವಿದ್ಯಾರ್ಥಿಗಳ ವಿವರ ಮಂಡಿಸಿ ಕೊನೆಯಲ್ಲಿ ವಂದಿಸಿದರು. ನಿರ್ದೇಶಕರಾದ ರಮೇಶ್ ಭಟ್, ಶ್ರೀಧರ ಗೌಡ, ರಾಧಾಕೃಷ್ಣ ಶೆಟ್ಟಿ ಸಹಕರಿಸಿದ್ದರು. ನಿರ್ದೇಶಕ ಸಂಜೀವ ಶೆಟ್ಟಿ ಕುಂಟಿನಿ ಕಾರ್ಯಕ್ರಮ ನಿರೂಪಿಸಿದರು.

Gayathri SG

Recent Posts

ಸ್ವಾತಿ ಮೇಲಿನ ಹಲ್ಲೆ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಬಿಭವ್ ಅರ್ಜಿ

ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ…

8 mins ago

ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್‌ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…

50 mins ago

ʼರಾಹುಲ್ ಮತ್ತು ನಾನು ಒಟ್ಟಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಬಿಜೆಪಿ ಲಾಭವಾಗುತ್ತಿತ್ತುʼ

ದೇಶದ್ಯಾಂತ ಕಾಂಗ್ರೆಸ್‌ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…

52 mins ago

ಪೊಲೀಸ್‌ ಕಸ್ಟಡಿಯಲ್ಲಿಯೇ ದಂಪತಿ ಆತ್ಮಹತ್ಯೆ: ರೊಚ್ಚಿಗೆದ್ದು ಠಾಣೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು

ಪೊಲೀಸ್‌ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.

1 hour ago

ಆತ್ಮಹತ್ಯೆಗೆ ಮುನ್ನ ನಟ ಚಂದು ಲಾಸ್ಟ್​ ಮೆಸೇಜ್​ ಇದು

ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್​…

2 hours ago

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

2 hours ago