ಮಂಗಳೂರು: ಮಂಗಳೂರು ಧಕ್ಕೆಯಲ್ಲಿ ಪ್ರತೀ ವರ್ಷದ ತನ್ನ ಮತ್ತು ಇತರ ಸಂಘದ ಸಭೆಯ ನಿರ್ಣಯದಂತೆ, ಹಸಿ ಮೀನು ವ್ಯಾಪಾರಸ್ಥರ ಸಂಘ, ಸದಸ್ಯರು ಅವರರವರು ಆಚರಿಸಿಕೊಂಡು ಬರುತ್ತಿರುವ ಧಾರ್ಮಿಕ ಹಬ್ಬ ದಿನಗಳಲ್ಲಿ ತಮ್ಮ ವ್ಯವಹಾರಕ್ಕೆ ಖಡ್ಡಾಯ ರಜೆ ಹೊಂದುವ ಪೂರ್ವ ನಿರ್ಧರಿತ ಪದ್ಧತಿಯಂತೆ ಈ ಬರುವ ತಾರೀಕು 28 ಸೆಪ್ಟೆಂಬರ್ 2023 ರಂದು ಮುಸ್ಲಿಮ್ ಭಾಂದವರ ಹಬ್ಬವಾದ ಈದ್ ಮಿಲಾದ್ ಪ್ರಯುಕ್ತ ಅವರು ಮತ್ತು ಇತರ ಧರ್ಮ ಭಾಂದವರು ಖಡ್ಡಾಯ ರಜೆ ಪಾಲಿಸುವ ಬಗ್ಗೆ ವಿವಿಧ ಸಂಘಗಳಲ್ಲಿ ನಿರ್ಣಯಿಸಿದಂತೆ ಪ್ರಕಟಣೆ ಫಲಕ ಅಳವಡಿಸಲಾಗಿರುತ್ತದೆ.
ಅದೇ ರೀತಿಯಲ್ಲಿ ವರ್ಷದ ಇತರ ದಿನಗಳಲ್ಲಿ ಇತರ ಹಬ್ಬಗಳಾದ ಬಾರ್ಕೂರು ಪೂಜೆ, ಉಚ್ಚಿಲ ಪೂಜೆ, ಗಣೇಶ ಚತುರ್ಥಿ, ಈದ್ ಉಲ್ ಫಿತರ್, ಬಕ್ರೀದ್, ಈದ್ ಮಿಲಾದ್, ಗುಡ್ ಫ್ರೈಡೇ ಮತ್ತು ಕ್ರಿಸ್ಮಸ್ ಎಂಬಿತ್ಯಾದಿ ಶುಭ ದಿನಗಳಲ್ಲಿ ಕೂಡಾ ಸಂಘಗಳ ನಿರ್ಣಯದಂತೆ ಮಾರಾಟಗಾರರು ಖಡ್ಡಾಯ ರಜೆ ಹೊಂದಿ ಆ ದಿನದ ಮಟ್ಟಿಗೆ ಮೀನುಗಾರಿಕಾ ಮಾರಾಟ ಚಟುವಟಿಕೆ ಸ್ಥಗಿತ ಗೊಳಿಸುವುದು ಅನೇಕ ವರ್ಷಗಳಿಂದ ನಡೆದು ಕೊಂಡು ಬಂದಿರುತ್ತದೆ.
ಮಂಗಳೂರು ದಕ್ಕೆಯಲ್ಲಿ ಮೀನುಗಾರಿಕಾ ಚಟುವಟಿಕೆಯಲ್ಲಿ ಹಸಿ ಮೀನು ಮಾರಾಟಗಾರರ ಮತ್ತು ಕಮಿಷನ್ ಏಜೆಂಟರ ಸಂಘ, ಪರ್ಶಿಯನ್ ಬೋಟ್ ಯೂನಿಯನ್, ಟ್ರಾಲ್ ಬೋಟ್ ಯೂನಿಯನ್, ಫಿಶ್ ಬಯ್ಯರ್ಸ್ ಎಸೋಸಿಯೇಶನ್ ಮತ್ತಿತರ ಸಂಘಗಳು ಸಂಯುಕ್ತವಾಗಿ ಈ ರಜೆಗಳನ್ನು ನಿರ್ಧರಿಸಲಾಗಿದೆ.
ಆದರೆ ಇತ್ತೀಚೆಗೆ ಸಾಮಾಜಿಕ ಜಾಲ ತಾಣದಲ್ಲಿ ಸಂಘದ ಮೀಲಾದ್ ರಜೆಯ ಪ್ರಕಟನಾ ಫಲಕ ( ಫ್ಲೆಕ್ಸ್ ) ದ ಬಗ್ಗೆ ಕೆಲವರು ತಪ್ಪು ಗ್ರಹಿಕೆಯ ಪ್ರಚೋದನಾತ್ಮಕ ಮಾಹಿತಿ ಹಂಚುತ್ತಿರುವುದು ಖೇದಕರ. ಇಂತಹ ತಪ್ಪು ಮಾಹಿತಿ ಗಳಿಂದ ಸಾರ್ವಜನಿಕರು ಗೊಂದಲಕ್ಕೆ ಒಳಗಾಗಬಾರದಾಗಿ ವಿನಂತಿ ಎಂದು ಮಂಗಳೂರು ಧಕ್ಕೆ ಹಸಿಮೀನು ಮಾರಾಟಗಾರರ ಮತ್ತು ಕಮಿಷನ್ ಏಜೆಂಟರ ಸಂಘ ಅಧ್ಯಕ್ಷ,
ಮಾಜಿ ಮೇಯರ್ ಕೆ. ಅಶ್ರಫ್ ಮನವಿ ಮಾಡಿದ್ದಾರೆ.
ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್ಗಳ…
ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…
ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…
ತಮಿಳುನಾಡಿನ ಖಾಸಗಿ ಟಿವಿ ಚಾನೆಲ್ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್ ಮುನಿಸ್ವಾಮಿ…
ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ. ಹೌದು. .…
ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್ಸಿಬಿ vs ಸಿಎಸ್ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…