News Karnataka Kannada
Saturday, May 04 2024
ಮಂಗಳೂರು

ಡಾ.ಸಿ.ಎನ್.ಅಶ್ವತ್ಥನಾರಾಯಣ ಸಚಿವ ಸ್ಥಾನಕ್ಕೆ ತಕ್ಷಣ ರಾಜೀನಾಮೆ ನೀಡಬೇಕು- ಹೈವನ್ ಡಿಸೋಜಾ ಒತ್ತಾಯ

ಹೈವನ್ ಡಿಸೋಜಾ
Photo Credit : News Kannada

ಮಂಗಳೂರು: ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಅವರು ತಮ್ಮ ಸಚಿವ ಸ್ಥಾನಕ್ಕೆ ತಕ್ಷಣ ರಾಜೀನಾಮೆ ನೀಡಬೇಕು ಕೆಪಿಸಿಸಿ ಉಪಾಧ್ಯಕ್ಷ ಹೈವನ್ ಡಿಸೋಜಾ ಒತ್ತಾಯಿಸಿದ್ದಾರೆ.

ನಗರದಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಅಶ್ವತ್ಥನಾರಾಯಣ ವಿರುದ್ಧ ಭಾರತೀಯ ದಂಡ ಸಂಹಿತೆ 352ರ ಪ್ರಕಾರ ನಗರ ಪೊಲೀಸ್‌ ಅಯುಕ್ತರಿಗೆ ದೂರು ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಸಚಿವರೊಬ್ಬರು ಈ ರೀತಿ ಪ್ರಚೋದನಕಾರಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಸ್ವಯಂ ಪ್ರೇರಿತರಾಗಿ ಪೊಲೀಸರು ಪ್ರಕರಣ ದಾಖಲಿಸಬೇಕು. ರಾಜ್ಯಪಾಲರು ಈ ಪ್ರಕರಣದಲ್ಲಿ ಮಧ್ಯ ಪ್ರವೇಶಿಸಬೇಕು ಎಂದು ಐವನ್ ಅಗ್ರಹಿಸಿದರು.

ಸಚಿವ ಡಾ.ಅಶ್ವತ್ಥನಾರಾಯಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೆ, ಅವರನ್ನು ಪೊಲೀಸರು ಬಂಧಿಸುವವರೆಗೆ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ ಎಂದು ಐವನ್ ಡಿಸೋಜ ತಿಳಿಸಿದರು.

ಟಿಪ್ಪುವಿನ ಬಗ್ಗೆ ಜನರಲ್ಲಿ ದ್ವೇಷ ಭಾವನೆ ಮೂಡಿಸುತ್ತಿರುವ ಅಶ್ವತ್ಥನಾರಾಯಣ ಅವರು, ಟಿಪ್ಪು ಪುಸ್ತಕ ಬಿಡುಗಡೆಗೊಳಿಸಿದ ಜಗದೀಶ್ ಶೆಟ್ಟರ್, ಟಿಪ್ಪು ಪೋಷಾಕು ಧರಿಸಿದ ಯಡಿಯೂರಪ್ಪರಿಗೂ ಸಿದ್ದರಾಮಯ್ಯರ ವಿರುದ್ಧ ನೀಡಿದ ಹೇಳಿಕೆಯನ್ನೇ ನೀಡುತ್ತಾರಾ ಎಂದು ಐವನ್ ಪ್ರಶ್ನಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಕೋಡಿಜಾಲ್ ಇಬ್ರಾಹೀಂ, ಅಪ್ಪಿ, ಪ್ರಕಾಶ್ ಸಾಲ್ಯಾನ್, ಭಾಸ್ಕರ ರಾವ್, ಸಬಿತಾ ಮಿಸ್ಮಿತ್, ಮುತ್ತಪ್ಪ, ಮೀನಾ ಟೆಲ್ಲೀಸ್, ಸಲೀಂ, ಅಲಿಪ್ಪನ್ ಮೊದಲಾದವರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು