ಮಂಗಳೂರು: ಭಾರತೀಯ ಜನತಾ ಪಾರ್ಟಿ ಗುರುಪುರ ಶಕ್ತಿಕೇಂದ್ರ ವತಿಯಿಂದ ಡಾ. ಭರತ್ ಶೆಟ್ಟಿ ವೈ ಇವರ ನೇತೃತ್ವದಲ್ಲಿ ಚುನಾವಣಾ ಮಹಾಭಿಯಾನದ ಪ್ರಯುಕ್ತ ಜಂಗಮಠದಿಂದ ಗುರುಪುರ ಪೇಟೆಯಲ್ಲಿ ರೋಡ್ ಶೋ ನಡೆಯಿತು.
ಈ ಸಂದರ್ಭದಲ್ಲಿ ಚುನಾಯಿತ ಪ್ರತಿನಿಧಿಗಳು, ಪಕ್ಷದ ಮುಖಂಡರು, ವಿವಿಧ ಮೋರ್ಚಾದ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.