ಮಂಗಳೂರು: ದುಬೈಗೆ ನಿನ್ನೆ ರಾತ್ರಿ(10-7-23) 11ಗಂಟೆಗೆ ಹೊರಡಬೇಕಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ವಿಳಂಬವಾದ ಹಿನ್ನಲೆ ನಿನ್ನೆ ರಾತ್ರಿ 11 ಗಂಟೆಯಿಂದ ಏರ್ಪೋರ್ಟ್ ನಲ್ಲಿ ಪ್ರಯಾಣಿಕರು ಪರದಾಡಿದ ಘಟನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ.
ವಿಮಾನದ ಇಂಜಿನ್ ಹಾಳಾದ ಕಾರಣ ಬದಲಿ ವ್ಯವಸ್ಥೆ ಮಾಡದೇ ರಾತ್ರಿ ಇಡಿ ವಿಮಾನ ನಿಲ್ದಾಣದಲ್ಲೇ ಉಳಿಯುವಂತೆ ಮಾಡಿದ ಅಧಿಕಾರಿಗಳ ವಿರುದ್ಧ ಪ್ರಯಾಣಿರು ಆಕ್ರೋಶ ವ್ಯಕ್ತ ಪಡಿಸಿದರು. ಈ ನಡುವೆ ಅಧಿಕಾರಿಗಳೊಂದಿಗೆ ಪ್ರಯಾಣಿಕರ ಮಾತಿನ ಚಕಮಕಿ ನಡೆಯಿತು.