Categories: ಮಂಗಳೂರು

ಜೂಜುಕೇಂದ್ರ,‌ ಅಕ್ರಮಗಳ ನಿಯಂತ್ರಿಸಲಾಗದ ಪೊಲೀಸ್ ಆಯುಕ್ತರ ವರ್ಗಾವಣೆಗೆ ಒತ್ತಾಯ- ಡಿವೈಎಫ್ಐ

ಮಂಗಳೂರು: ಬಡವರ ಬದುಕನ್ನು ಬಲಿಪಡೆಯುತ್ತಿರುವ ಸ್ಕಿಲ್ ಗೇಮ್, ವಿಡಿಯೋ ಗೇಮ್, ಇಸ್ಪೀಟ್ ಕ್ಲಬ್, ಜುಗಾರಿ ಅಡ್ಡೆಗಳು ರಾಜಾರೋಷವಾಗಿ ನಡೆಯುತ್ತಿದ್ದರೂ ಪೊಲೀಸ್ ಇಲಾಖೆ ಇವುಗಳ ವಿರುದ್ದ ಯಾವುದೇ ಕ್ರಮಕೈಗೊಳ್ಳದೆ ಕೇವಲ ನಾಟಕೀಯ ಬೆಳವಣೆಗೆ ರೀತಿಯಲ್ಲಿ ಕೆಲದಿನಗಳಿಗಷ್ಟೇ ಬಾಗಿಲು ಮುಚ್ಚಿಸಿ ಈಗ ಮತ್ತೆ ಯಥಾಸ್ಥಿತಿ ಪ್ರಾರಂಭಗೊಂಡಿದೆ. ಈ ರೀತಿ ರಾಜಾರೋಷವಾಗಿ ನಡೆಯುತ್ತಿರುವ ಜೂಜುಕೇಂದ್ರಗಳ ಮೇಲೆ ಕ್ರಮಕೈಗೊಳ್ಳಲಾಗದ ಮಂಗಳೂರು ನಗರ ಪೊಲೀಸ್ ಆಯುಕ್ತರ ನಡೆಯನ್ನು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ವಿರೋಧಿಸುತ್ತದೆ. ಜೂಜುಕೇಂದ್ರಗಳಿಗೆ ಶಾಶ್ವತ ಬಾಗಿಲು ಮುಚ್ಚಲು ಕ್ರಮಕೈಗೊಳ್ಳಲು ಸಾಧ್ಯವಾಗದ ಪೊಲೀಸ್ ಆಯುಕ್ತರನ್ನು ವರ್ಗಾವಣೆಗೊಳಿಸಿ ದಕ್ಷ ಅಧಿಕಾರಿಯನ್ನು ನೇಮಿಸಬೇಕೆಂದು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ರಾಜ್ಯ ಸರಕಾರವನ್ನು ಒತ್ತಾಯಿಸಿದೆ.

ಮಂಗಳೂರು ಪೊಲೀಸ್ ಕಮೀಷನರೇಟ್ ವ್ತಾಪ್ತಿಯಲ್ಲಿ ಸ್ಕಿಲ್ ಗೇಮ್, ಇಸ್ಪೀಟ್ ಕ್ಲಬ್, ಜುಗಾರಿ ಅಡ್ಡೆಗಳು ರಾಜರೋಷವಾಗಿ ನಡೆಯುತ್ತಿದ್ದು ಈ ಬಗ್ಗೆ ಹಲವಾರು ಬಾರಿ ಪೊಲೀಸ್ ಇಲಾಖೆಯ ಗಮನಕ್ಕೆ ತಂದರೂ ಪೊಲೀಸ್‌ ಇಲಾಖೆ ಅವುಗಳ ನಿಯಂತ್ರಿಸಲು ಯಾವೊಂದು ಕ್ರಮಗಳನ್ನು ಕೈಗೊಳ್ಳದೇ ಇದ್ದಾಗ ಡಿವೈಎಫ್ಐ‌ ಸಂಘಟನೆ ನಗರ ಜೂಜುಕೇಂದ್ರಗಳಿಗೆ ಮುತ್ತಿಗೆ ಹಾಕಿ ಸಾಂಕೇತಿಕ ಪ್ರತಿಭಟನೆ ನಡೆಸಿ ಇಲಾಖೆಯ ಗಮನಕ್ಕೆ ತಂದು ಮುಂದೆ ಈ ಜೂಜುಕೇಂದ್ರಗಳು ಶಾಶ್ವತವಾಗಿ ಮುಚ್ಚಬೇಕೆಂದು ನಗರದ ಮಿನಿವಿಧಾನ ಸೌಧದ ಮುಂಭಾಗ ಪ್ರತಿಭಟನೆಯನ್ನು ಹಮ್ಮಿಕೊಂಡು ಒತ್ತಾಯಿಸಲಾಗಿತ್ತು. ಈ ನಡುವೆ ಕೆಲವು ದಿನಗಳ ಕಾಲ ಬಾಗಿಲು ಮುಚ್ಚಿಸಿದ ಪೊಲೀಸ್ ಇಲಾಖೆ ಈಗ ಮತ್ತೆ ಬಾಗಿಲು ತೆರೆದಿರುವ ಜೂಜುಕೇಂದ್ರಗಳ ಮೇಲೆ ಕ್ರಮಕೈಗೊಳ್ಳದೇ ಇರಲು ಕಾರಣ ಏನು? ಎಲ್ಲಾ ಜೂಜುಕೇಂದ್ರಗಳಿಗೆ ಬಾಗಿಲು ಮುಚ್ಚಿಸಿದ್ದೇವೆಂದು ಮಾಧ್ಯಮದ ಮುಂದೆ ಉತ್ತರಿಸಿದ ಆಯುಕ್ತರು ಈಗ ಮತ್ತೆ ಬಾಗಿಲು ತೆರೆದಿರುವ ಜೂಜುಕೇಂದ್ರಗಳ ಬಗ್ಗೆ ಏನನ್ನುತ್ತಾರೆ? ಪೊಲೀಸರು ಬಾಗಿಲು ಮುಚ್ಚಿಸಿದ ನಂತರ ಮತ್ತೆ ಬಾಗಿಲು ತೆರೆಯುವಷ್ಟು ಧೈರ್ಯ ಈ ಜೂಜುಕೇಂದ್ರ ನಡೆಸುವ ಮಾಫಿಯಾಗಳಿಗೆ ಎಲ್ಲಿಂದ ಬಂತು? ನಗರದಲ್ಲಿ ಇಂತಹ ಜೂಜುಕೇಂದ್ರ ರಾಜಾರೋಷವಾಗಿ ನಡೆಯುತ್ತಿರುವುದರ ಹಿಂದೆ ಪೊಲೀಸ್ ಇಲಾಖೆಯ ಸಹಕಾರಗಳಿವೆ ಎಂಬ ಆರೋಪಗಳು ಸಾರ್ವಜನಿಕ ವಲಯದಲ್ಲಿ ಬಲವಾಗಿ ಕೇಳಿ ಬರುತ್ತಿವೆ. ಇಂತಹ ಆರೋಪಗಳಿಗೆ ಪೊಲೀಸ್ ಆಯುಕ್ತರು ಯಾಕೆ ಉತ್ತರಿಸುತ್ತಿಲ್ಲ?. ಸದ್ರಿ ನಗರದಲ್ಲಿ ಕಾನೂನು ಸುವ್ಯವಸ್ಥೆಯ ದಯನೀಯ ವೈಫಲ್ಯದಿಂದ ಹಾಡುಹಗಲೇ ಕೊಲೆ, ಸುಲಿಗೆ, ದರೋಡೆಯಂತಹ ಘಟನೆಗಳು ನಡೆಯುತ್ತಿದ್ದು ಇವುಗಳನ್ನೆಲ್ಲಾ ನಿಯಂತ್ರಿಸಲಾಗದ ಪೊಲೀಸ್ ಇಲಾಖೆಯ ಕಾರ್ಯವೈಖರಿಯಿಂದ ಮಂಗಳೂರಿನ ಜನತೆ ಪೊಲೀಸರ ಮೇಲಿನ ನಂಬಿಕೆಯನ್ನು ಕಳೆದುಕೊಳ್ಳುವಂತಾಗಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತರು ಇಷ್ಟೊಂದು ಜನವಿರೋಧಿಯಾಗಿ ವರ್ತಿಸಬಾರದು.

ಈ ಹಿನ್ನಲೆಯಲ್ಲಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಈ ಕೂಡಲೇ ರಾಜಾರೋಷವಾಗಿ ನಡೆಯುತ್ತಿರುವ ಸ್ಕಿಲ್ ಗೇಮ್, ವಿಡಿಯೋ ಗೇಮ್, ಇಸ್ಪೀಟ್‌ ಕ್ಲಬ್, ಜುಗಾರಿ ಅಡ್ಡೆಗಳನ್ನು ಶಾಶ್ವತವಾಗಿ ಮುಚ್ಚಲು ಕ್ರಮಕೈಗೊಳ್ಳಬೇಕು ಅಸಾಧ್ಯವಾದಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತರನ್ನು ವರ್ಗಾವಣೆಗೊಳಿಸಿ ದಕ್ಷ ಅಧಿಕಾರಿಯನ್ನು ನೇಮಿಸಲಿ ಎಂದು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ರಾಜ್ಯ ಸರಕಾರವನ್ನು ಒತ್ತಾಯಿಸಿದೆ ಎಂದು ಜಿಲ್ಲಾಧ್ಯಕ್ಷರಾದ ಬಿ.ಕೆ ಇಮ್ತಿಯಾಜ್, ಕಾರ್ಯದರ್ಶಿ ಸಂತೋಷ್ ಬಜಾಲ್ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Gayathri SG

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

3 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

3 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

4 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

4 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

4 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

4 hours ago