ಸುಳ್ಯ: ತಾಲೂಕಿನ ಅಜ್ಜಾವರ ಗ್ರಾಮದ ಪ್ರತ್ಯೇಕ ಎರಡು ಸ್ಥಳಗಳಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಜ್ವಾಲೆ ಅರಣ್ಯ ಭಾಗದಲ್ಲಿ ವ್ಯಾಪಿಸಿ ವ್ಯಾಪಕ ಕಾಡುನಾಶವಾದ ಘಟನೆ ಜ.೨೦ ರಂದು ನಡೆದಿದೆ.
ಕಾಟಿಪಳ್ಳ ಮತ್ತು ನೀಲಗಿರಿ ಬಸ್ಸು ತಂಗುದಾಣದ ಬಳಿಯಲ್ಲಿ ಒಮ್ಮೆಲೆ ಅಗ್ನಿ ಜ್ವಾಲೆ ವ್ಯಾಪಿಸಿದ್ದು ಸುಳ್ಯ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ .
ಇದೇ ಪ್ರದೇಶದಲ್ಲಿ ಹಲವು ವರ್ಷಗಳಿಂದ ಅಗ್ನಿ ಅವಘಡ ಸಂಭವಿಸುತ್ತಿತ್ತು ಎಂದು ಹೇಳಲಾಗುತ್ತಿತ್ತು, ಸುಮಾರು ಮೂರುವರೆ ಎಕರೆ ಪ್ರದೇಶ ಬೆಂಕಿಯ ಕೆನ್ನಾಲಿಗೆಗೆ ತುತ್ತಾಗಿದೆ ಎಂದು ತಿಳಿದು ಬಂದಿದೆ.