ಬೆಳ್ತಂಗಡಿ: ಮಗನ ಉತ್ತರ ಕ್ರಿಯೆ ನಡೆದು ಎರಡು ದಿನದಲ್ಲಿ ತಂದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಜಿರೆಯಲ್ಲಿ ನಡೆದಿದೆ. ಉಜಿರೆ ಗ್ರಾಮದ ಪೆರ್ಲ ನಿವಾಸಿ ಯೋಗೇಶ್ ಪೂಜಾರಿ(41) ಆತ್ಮಹತ್ಯೆ ಮಾಡಿಕೊಂಡುವರು ಎಂದು ತಿಳಿದು ಬಂದಿದೆ.
ಜ. 4ರಂದು 8ನೇ ತರಗತಿ ಓದುತ್ತಿದ್ದ ಮಗ ಯಕ್ಷಿತ್ (14) ನೇಣು ಬಿಗಿದ ಆತ್ಮಹತ್ಯೆ ಮಾಡಿಕೊಂಡಿದ್ದ.ಮಗನ ಉತ್ತರಕ್ರಿಯೆ ಜ. 14ರಂದು ಭಾನುವಾರ ನಡೆದಿತ್ತು. ಯೋಗೇಶ್ ಪೂಜಾರಿ ಮತ್ತು ರೇಷ್ಮೆ ದಂಪತಿಯ ಪುತ್ರ ಯಕ್ಷಿತ್ ಸಾವಿಗೆ ತಮ್ಮನ ಜೊತೆಗಿನ ಕ್ಷುಲ್ಲಕ ಜಗಳ ಕಾರಣ ಎನ್ನಲಾಗಿತ್ತು.
ಆರು ವರ್ಷದ ತಮ್ಮನ ಜೊತೆ ಪದೇಪದೇ ಗಲಾಟೆ ನಡೆಯುತ್ತಿತ್ತು. ಆದರೆ ಈ ಸಲ ಗಲಾಟೆಯಲ್ಲಿ ತಮ್ಮ ಅಣ್ಣನ ಹೊಟ್ಟೆಯ ಮೇಲೆ ಕಚ್ಚಿ ಗಾಯ ಮಾಡಿದ್ದು, ಈ ವಿಚಾರಕ್ಕೆ ನೊಂದ ತಮ್ಮನ ಎದುರೇ ಯಕ್ಷಿತ್ ಆತ್ಮಹತ್ಯೆ ಮಾಡಿದ್ದ. ಯಕ್ಷಿತ್ ಉಜಿರೆ ಖಾಸಗಿ ಶಾಲೆಯಲ್ಲಿ 8ನೇ ತರಗತಿ ಕಲಿಯುತಿದ್ದ. ತಂದೆ ತಾಯಿ ಕೆಲಸಕ್ಕೆ ಹೋದ ಬಳಿಕ ಬಾಲಕ ಮನೆಯ ಕೊಠಡಿಯಲ್ಲಿ ತಾಯಿಯ ಸೀರೆಯನ್ನು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. ಬೆಳ್ತಂಗಡಿ ಪೊಲೀಸರು ಸ್ಥಳ ಪರಿಶೀಲಿಸಿದ್ದರು.