News Karnataka Kannada
Tuesday, April 30 2024
ಮಂಗಳೂರು

ಮಗನ ಸಾವಿನ 13ನೇ ದಿನಕ್ಕೆ ತಂದೆಯೂ ಆತ್ಮಹತ್ಯೆ

New Project 2024 01 16t161302.157
Photo Credit : News Kannada

ಬೆಳ್ತಂಗಡಿ: ಮಗನ ಉತ್ತರ ಕ್ರಿಯೆ ನಡೆದು ಎರಡು ದಿನದಲ್ಲಿ ತಂದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಜಿರೆಯಲ್ಲಿ ನಡೆದಿದೆ. ಉಜಿರೆ ಗ್ರಾಮದ ಪೆರ್ಲ ನಿವಾಸಿ ಯೋಗೇಶ್ ಪೂಜಾರಿ(41) ಆತ್ಮಹತ್ಯೆ ಮಾಡಿಕೊಂಡುವರು ಎಂದು ತಿಳಿದು ಬಂದಿದೆ.

ಜ. 4ರಂದು 8ನೇ ತರಗತಿ ಓದುತ್ತಿದ್ದ ಮಗ ಯಕ್ಷಿತ್ (14) ನೇಣು ಬಿಗಿದ ಆತ್ಮಹತ್ಯೆ ಮಾಡಿಕೊಂಡಿದ್ದ.ಮಗನ ಉತ್ತರಕ್ರಿಯೆ ಜ. 14ರಂದು ಭಾನುವಾರ ನಡೆದಿತ್ತು. ಯೋಗೇಶ್ ಪೂಜಾರಿ ಮತ್ತು ರೇಷ್ಮೆ ದಂಪತಿಯ ಪುತ್ರ ಯಕ್ಷಿತ್ ಸಾವಿಗೆ ತಮ್ಮನ ಜೊತೆಗಿನ ಕ್ಷುಲ್ಲಕ ಜಗಳ ಕಾರಣ ಎನ್ನಲಾಗಿತ್ತು.

ಆರು ವರ್ಷದ ತಮ್ಮನ ಜೊತೆ ಪದೇಪದೇ ಗಲಾಟೆ ನಡೆಯುತ್ತಿತ್ತು. ಆದರೆ ಈ ಸಲ ಗಲಾಟೆಯಲ್ಲಿ ತಮ್ಮ ಅಣ್ಣನ ಹೊಟ್ಟೆಯ ಮೇಲೆ ಕಚ್ಚಿ ಗಾಯ ಮಾಡಿದ್ದು, ಈ ವಿಚಾರಕ್ಕೆ ನೊಂದ ತಮ್ಮನ ಎದುರೇ ಯಕ್ಷಿತ್ ಆತ್ಮಹತ್ಯೆ ಮಾಡಿದ್ದ. ‌ ಯಕ್ಷಿತ್ ಉಜಿರೆ ಖಾಸಗಿ ಶಾಲೆಯಲ್ಲಿ 8ನೇ ತರಗತಿ ಕಲಿಯುತಿದ್ದ. ತಂದೆ ತಾಯಿ ಕೆಲಸಕ್ಕೆ ಹೋದ ಬಳಿಕ ಬಾಲಕ ಮನೆಯ ಕೊಠಡಿಯಲ್ಲಿ ತಾಯಿಯ ಸೀರೆಯನ್ನು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. ಬೆಳ್ತಂಗಡಿ ಪೊಲೀಸರು ಸ್ಥಳ ಪರಿಶೀಲಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು