ಮಂಗಳೂರು: ಅಲೋಶಿಯಸ್ ಸಮೂಹ ಸಂಸ್ಥೆಗಳ ಪೋಷಕ ಸಂತರಾದ ಅಲೋಶಿಯಸ್ ಗೊನ್ಝಾಗ ಅವರ ಹಬ್ಬವನ್ನು 21 ಜೂನ್ 2023 ರಂದು ಲೊಯೊಲಾ ಸಭಾಂಗಣದಲ್ಲಿ ‘ಉತ್ತಮ ಭವಿಷ್ಯವನ್ನು ರೂಪಿಸಲು ಯುವಜನಾಂಗವನ್ನು ಜಾಗೃತಗೊಳಿಸುವುದು’ ಎಂಬ ಧ್ಯೇಯವಾಕ್ಯದೊಂದಿಗೆ ವಿಜೃಂಭಣೆಯಿಂದ ಆಚರಿಸಲಾಯಿತು.
ಮಂಗಳೂರು ಧರ್ಮಪ್ರಾಂತ್ಯದ ವಿಕಾರ್ ಜನರಲ್ ಮೊ. ಲಾರೆನ್ಸ್ ಮಾಕ್ಸಿಮ್ ನೊರೋನ್ಹಾ ಅವರು ಬಲಿಪೂಜೆಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಅಲೋಶಿಯಸ್ ಸಮೂಹ ಸಂಸ್ಥೆಗಳ ವರಿಷ್ಠರಾದ ವಂ| ಗು| ಮೆಲ್ವಿನ್ ಪಿಂಟೊ ಎಸ್ ಜೆ, ಕಾಲೇಜಿನ ಪ್ರಾಚಾರ್ಯರಾದ ವಂ| ಗು| ಕ್ಲಿಫರ್ಡ್ ಸಿಕ್ವೇರಾ ಎಸ್ ಜೆ, ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ಪ್ರಾಂಶುಪಾಲರಾದ ವಂ| ಗು| ಮೆಲ್ವಿನ್ ಲೋಬೊ ಎಸ್ ಜೆ, ಹಾಗೂ ಸಂತ ಅಲೋಶಿಯಸ್ ಐಟಿಐ ನಿರ್ದೇಶಕರಾದ ವಂ| ಗು| ಜಾನ್ ಡಿಸೋಜ ಉಪಸ್ಥಿತರಿದ್ದರು. ಕಾಲೇಜಿನ ಸುಮಾರು 1200 ವಿದ್ಯಾರ್ಥಿಗಳು, ಶಿಕ್ಷಕ ಹಾಗೂ ಶಿಕ್ಷಕೇತರ ವೃಂದ ಹಾಗೂ ಕಾಲೇಜಿನ ಹಿತಚಿಂತಕರು ಹಬ್ಬದ ಆಚರಣೆಯಲ್ಲಿ ಭಾಗಿಯಾಗಿದ್ದರು.
ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ವಂ| ಗು| ಕ್ಲಿಫರ್ಡ್ ಸಿಕ್ವೇರಾ ಎಸ್ ಜೆ ಇವರು ವಂದನಾರ್ಪಣೆಗೈದರು. ಸಂತ ಅಲೋಶಿಯಸ್ ಗೊನ್ಝಾಗ ಹಬ್ಬದ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಲಾಯಿತು.
ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…
ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…
ತಮಿಳುನಾಡಿನ ಖಾಸಗಿ ಟಿವಿ ಚಾನೆಲ್ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್ ಮುನಿಸ್ವಾಮಿ…
ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ. ಹೌದು. .…
ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್ಸಿಬಿ vs ಸಿಎಸ್ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…
ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.