News Karnataka Kannada
Wednesday, May 08 2024
ಮಂಗಳೂರು

 ಭ್ರೂಣ  ಹತ್ಯೆ ಕೇಸ್: ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದ ಸಚಿವ ಗುಂಡೂರಾವ್‌

ಭ್ರೂಣ ಹತ್ಯೆ ಕೇಸ್ ಆರೋಪವಿದ್ದ ವೈದ್ಯ ಆತ್ಮಹತ್ಯೆ ಪ್ರಕರಣ ಸಂಬಂಧ ನಾನು ಎಲ್ಲಾ ಕಡೆ ಭೇಟಿ ಕೊಟ್ಟು ಮಾಹಿತಿ ಕಲೆ ಹಾಕಿದ್ದೇನೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
Photo Credit : News Kannada

ಮಂಗಳೂರು: ಭ್ರೂಣ ಹತ್ಯೆ ಕೇಸ್ ಆರೋಪವಿದ್ದ ವೈದ್ಯ ಆತ್ಮಹತ್ಯೆ ಪ್ರಕರಣ ಸಂಬಂಧ ನಾನು ಎಲ್ಲಾ ಕಡೆ ಭೇಟಿ ಕೊಟ್ಟು ಮಾಹಿತಿ ಕಲೆ ಹಾಕಿದ್ದೇನೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕರು ಸೇರಿ ಹಲವರ ಬಳಿ ನಾನು ಮಾಹಿತಿ ಪಡೆದಿದ್ದೆ. ಎಲ್ಲದರ ನಂತರ ಸಿಎಂಗೆ ಸಿಐಡಿ ತನಿಖೆ ಕೊಡಲು ಮನವಿ ಮಾಡಿದೆ.ಆ ಬಳಿಕ ಸಿಐಡಿ ತನಿಖೆಗೆ ಸಿಎಂ ಆದೇಶ ಮಾಡಿದ್ದಾರೆ ಎಂದರು. ಲೋಪವಾದ ಕಾರಣ ಇಬ್ಬರು ಅಧಿಕಾರಿಗಳ ಅಮಾನತು ನಡೆದಿದೆ.ಈ ಸತೀಶ್ ಬಗ್ಗೆಯೂ ಮಾಹಿತಿ ಬಂತು, ಅವರು ಇದರಲ್ಲಿ ಶಾಮೀಲಾಗಿದ್ದಾರೆ. ಆದರೆ ಅವರು ಈಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಆದರೆ ಯಾಕೆ ಕೃತ್ಯ ಎಸಗಿದ್ದಾರೆ ಎಂಬ ಮಾಹಿತಿ ಇಲ್ಲ. ಈ ಪ್ರಕರಣಕ್ಕೂ ಸತೀಶ್ ಆತ್ಮಹತ್ಯೆಗೂ ಲಿಂಕ್ ಇದ್ಯಾ‌ ನೋಡಬೇಕು. ಸತೀಶ್ ಕೂಡ ನಮ್ಮ ಆಯುಷ್ ಅಧಿಕಾರಿ, ಅವರ ಮೇಲೆ ಆರೋಪ ಕೇಳಿ ಬಂದಿದೆ.

ಆಯುಷ್ ಅಧಿಕಾರಿ ಆಗಿದ್ದರೂ ಅಲೋಪತಿ ಪ್ರಾಕ್ಟಿಸ್ ಮಾಡ್ತಿದ್ದರು. ಇವರ ಮೇಲೆ ಸಾಕಷ್ಟು ಆರೋಪ ಇದೆ, ಮೈಸೂರಲ್ಲೂ ದೂರುಗಳಿತ್ತು. ನಮ್ಮ ಇಲಾಖೆಯ ಅನೇಕ ಅಧಿಕಾರಿಗಳು ಇದರಲ್ಲಿ ಶಾಮೀಲಾಗಿದ್ದಾರೆ.ಆದರೆ ಅದೆಲ್ಲ ತನಿಖೆಯಲ್ಲಿ ಗೊತ್ತಾಗಬೇಕು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದರೆ ಅವರ ಆತ್ಮಹತ್ಯೆ ಯಾಕಾಗಿದೆ ಗೊತ್ತಿಲ್ಲ, ಇದಕ್ಕೂ ಅದಕ್ಕೂ ಸಂಬಂಧ ಇದ್ಯಾ ಗೊತ್ತಿಲ್ಲ. ಹೀಗಾಗಿ ನಾನು ಆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲ್ಲ. ಪೊಲೀಸ್ ಇಲಾಖೆ ಮತ್ತು ಸಿಐಡಿ ಈ ಬಗ್ಗೆ ಸಮಗ್ರ ತನಿಖೆ‌ ನಡೆಸಲಿದೆ.

ಈ ಭ್ರೂಣ ಹತ್ಯೆ‌ ತಡೆಯಲು ಕಠಿಣ ಕಾನೂನು ಅವಶ್ಯವಿದೆ. ಕಾನೂನಿನಲ್ಲಿ ಬದಲಾವಣೆ ಆಗಬೇಕಾ ಎಂಬ ಬಗ್ಗೆ ಚಿಂತನೆ ನಡೆಸಲಾಗ್ತಿದೆ. ಸ್ಕ್ಯಾನಿಂಗ್ ಸೆಂಟರ್ ಸೇರಿ ಹಲವು ಕಡೆ ಪರಿಶೀಲನೆ ಆಗಬೇಕಿದೆ.ಅದರ ಜೊತೆಗೆ ಕೆಲವು ಗುಪ್ತಚರ ಮಾಹಿತಿ ಕಲೆ ಹಾಕಬೇಕು. ಈ ಬಗ್ಗೆ ಪೊಲೀಸ್ ಇಲಾಖೆ ಜೊತೆ ಆರೋಗ್ಯ ಇಲಾಖೆ ಕೂಡ ಭಾಗಿಯಾಗಬೇಕಿದೆ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು