ಸುಬ್ರಹ್ಮಣ್ಯ: ಮಾಜಿ ಪ್ರಧಾನಿ ಎಚ್ . ಡಿ. ದೇವೇಗೌಡ ಅವರು ಆಗಸ್ಟ್ 17ರಂದು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಲಿದ್ದಾರೆ. ದೇವೇ ಗೌಡ ಅವರು ಆಗಸ್ಟ್ 17ರಂದು ಮಧ್ಯಾಹ್ನ 2.15ಕ್ಕೆ ಬಿಳಿನೆಲೆ ಶ್ರೀಗೋಪಾಲಕೃಷ್ಣ ಹೈಸ್ಕೂಲ್ ನ ಹೆಲಿಪ್ಯಾಡ್ ನಲ್ಲಿ ಬಂದಿಳಿಯಲಿದ್ದಾರೆ.
ಬಳಿಕ ರಸ್ತೆ ಮಾರ್ಗದ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಗುರುವಾರ ಕುಕ್ಕೆಯಲ್ಲಿ ತಂಗಲಿರುವ ಮಾಜಿ ಪ್ರಧಾನಿಗಳು ಆಗಸ್ಟ್ 18ರಂದು ಮಧ್ಯಾಹ್ನ 1 ಗಂಟೆಗೆ ಬಿಳಿನೆಲೆಯಿಂದ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದು ಬಂದಿದೆ.