ಧರ್ಮಸ್ಥಳ: ಮೂರು ಪಿಕಪ್ ವಾಹನದಲ್ಲಿ ಅಹಿಂಸಾತ್ಮಕವಾಗಿ ಜಾನುವಾರು ಸಾಗಾಟ ಪ್ರಕರಣವನ್ನು ಪತ್ತೆ ಹಚ್ಚಿದ ಧರ್ಮಸ್ಥಳ ಪೊಲೀಸರು ಮೂರು ಪಿಕಪ್ ನಲ್ಲಿದ್ದ ಜಾನುವಾರು ಸಹಿತ ನಾಲ್ವರನ್ನು ಬಂಧಿಸಿದ ಘಟನೆ ಜು.12 ರಂದು ವರದಿಯಾಗಿದೆ.
ಆರೋಪಿಗಳಾದ ಚೆನ್ನಕೇಶವ ಮರವಳಲು, ಕಸಬಾ ಹೋಬಳಿ, ಅರಕಲಗೂಡು ಹಾಸನ, ಪುಪ್ಷರಾಜ್ ಒಳಗದ್ದೆ ಮನೆ, ನಾವೂರು ಗ್ರಾಮ, ಪ್ರಮೋದ್ ಸಾಲ್ಯಾನ್ ಮೋರ್ತಾಜೆ ಮನೆ, ನಾವೂರು ಗ್ರಾಮ, ಸಂದೀಪ್ ಹಿರೇಬೆಳಗುಳಿ, ಹಳೇಕೋಟೆ ಹೋಬಳಿ, ಹೊಳೆನರಸೀಪುರ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.
ಘಟನೆ ಹಿನ್ನೆಲೆ: ಧರ್ಮಸ್ಥಳ ಠಾಣೆಯ ಎಸ್.ಐ ಅನೀಲಕುಮಾರ್ ತಂಡದವರು ಜು. 12 ರಂದು ಖಚಿತ ಮಾಹಿತಿಯಂತೆ ಧರ್ಮಸ್ಥಳ ಗ್ರಾಮದ ಕನ್ಯಾಡಿ ರಾಮ ಮಂದಿರದ ಬಳಿ ಸಿಬ್ಬಂದಿರವರುಗಳೊಂದಿಗೆ ವಾಹನ ತಪಾಸಣೆ ಮಾಡುತ್ತಿದ್ದ ಸಮಯ ರಾತ್ರಿ 8.45 ಗಂಟೆಗೆ ಉಜಿರೆ ಕಡೆಯಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಮೂರು ಪಿಕಪ್ ವಾಹನಗಳಾದ ಕೆಎ-21ಬಿ-7389 ಕೆಎ-70-0312 ಮತ್ತು ಕೆಎ670209 ನೇ ನೋಂದಣಿ ಸಂಖ್ಯೆಯ ವಾಹನಗಳನ್ನು ನಿಲ್ಲಿಸಿ ತಪಾಸಣೆ ನಡೆಸಿದಾಗ ಅಕ್ರಮವಾಗಿ ಜಾನುವಾರು ಸಾಗಾಟದ ಪ್ರಕರಣ ಬೆಳಕಿಗೆ ಬಂದಿತ್ತು.
ವಾಹನದಲ್ಲಿ 6 ದನ, 2 ಗಂಡು ಕರುಗಳು ಸೇರಿ ಒಟ್ಟು 8 ಜಾನುವಾರುಗಳನ್ನು ಹಿಂಸಾತ್ಮಕವಾಗಿ ತುಂಬಿಸಿ ಸಾಗಾಟ ಮಾಡುತ್ತಿರುವುದು ಕಂಡು ಬಂದಿತ್ತು. ವಾಹನದಲ್ಲಿದ್ದ ಚೆನ್ನಕೇಶವ ಎಂಬಾತನನ್ನು ಪೊಲೀಸರು ವಿಚಾರಿಸಿದಾಗ ಮಾರಾಟ ಮಾಡುವ ಉದ್ದೇಶದಿಂದ ವಾಹನದಲ್ಲಿ ಹಿಂಸಾತ್ಮಕವಾಗಿ ತುಂಬಿಸಿ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ ವಾಹನ ಸಹಿತ ಜಾನುವಾರುಗಳನ್ನು ಸ್ವಾದೀನಪಡಿಸಿಕೊಂಡ ಪೊಲೀಸರು ನಾಲ್ವರು ಆಪಾದಿತರುಗಳನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.
ಸ್ವಾಧೀನಪಡಿಸಿಕೊಂಡ ಜಾನುವಾರುಗಳ ಅಂದಾಜು ಮೌಲ್ಯ ರೂ. 65 ಸಾವಿರ ಹಾಗೂ ವಾಹನದ ಅಂದಾಜು ಮೌಲ್ಯ ರೂ.7 ಲಕ್ಷ ಒಟ್ಟು ಸ್ವಾಧೀನ ಪಡಿಸಿಕೊಂಡ ಸೊತ್ತುಗಳ ಅಂದಾಜು ಮೌಲ್ಯ ರೂ 7.65 ಲಕ್ಷ ಎಂದು ಅಂದಾಜಿಸಲಾಗಿದೆ. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಟ್ಟಿನ ಸಮಯದಲ್ಲಿ ನೋವು ತಾಳಲಾರದೆ ಅನಿವಾರ್ಯಕ್ಕೆ ಪೈನ್ ಕಿಲ್ಲರ್ ಸೇವಿಸುವುದು ಈಗ ಸಾಮನ್ಯವಾಗಿಬಿಟ್ಟಿದೆ. ಕೆಲವರಿಗೆ ಇದರ ಪರಿಣಾಮವು ಅರಿವಾಗಿದೆ. ಆದರೂ…
ಅನಾರೋಗ್ಯದಿಂದ ನೆಪವೊಡ್ಡಿ ಹಿರಿಯ ಪೈಲೆಟ್ಗಳು ಸಾಮೂಹಿಕವಾಗಿ ರಜೆಯಲ್ಲಿ ತೆರಳಿರುವ ಪರಿಣಾಮ ಸುಮಾರು 70ಕ್ಕೂ ಅಧಿಕ ಏರ್ ಇಂಡಿಯಾ ಎಕ್ಸ್ ಪ್ರೆಸ್…
ಪ್ರಿಯತಮೇ ಎದುರೆ ಓರ್ವ ಮಹಿಳೆ ಮೇಲೆ ಅತ್ಯಾಚಾರ ಎಸಗಿ ನಂತರ ಕೊಂದ ಪಾಪಿ ಪ್ರಿಯತಮ. ಈ ಘಟನೆ ಗೌರಿಬಿದನೂರು ತಾಲ್ಲೂಕಿನ…
ಭೋಪಾಲ್ನ ಪ್ರತಿ ಬೂತ್ನಲ್ಲಿ ಲಕ್ಕಿ ಡ್ರಾ ನಡೆಸಲಾಗಿದೆ. ಅದರಲ್ಲಿ ಅದೃಷ್ಟಶಾಲಿ ಮತದಾರರಿಗೆ ಉಡುಗೊರೆ ಸಿಗಲಿದೆ ಎಂದು ಘೋಷಣೆ ಮಾಡಲಾಗಿತ್ತು. ಹೀಗೇ…
ಯುನೈಟೆಡ್ ಸ್ಟೇಟ್ಸ್ನಲ್ಲಿ ಪತ್ತೆಯಾದ ಈ ಭಿನ್ನ ಗುಂಪನ್ನು ತೀವ್ರ ತೀವ್ರ ಉಸಿರಾಟದ ಸಿಂಡ್ರೋಮ್ ಕೊರೊನಾ ವೈರಸ್ 2 (SARS-CoV-2) ಫ್ಲರ್ಟ್…
ಚುನಾವಣೆ ಬಳಿಕ ಇವಿಎಂ ಯಂತ್ರಗಳು ಹಾಗೂ ಮತಗಟ್ಟೆ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್ಗೆ ಬೆಂಕಿ ತಗುಲಿರುವ ಘಟನೆ ಮಧ್ಯಪ್ರದೇಶದ ಬೇತುಲ್ನಲ್ಲಿ ನಡೆದಿದೆ.…