ಬೆಳ್ತಂಗಡಿ: ಮಹಿಳೆಯರಿಗೆ ಸರ್ಕಾರಿ ಬಸ್ ನಲ್ಲಿ ಉಚಿತ ಪ್ರಯಾಣ ಅವಕಾಶ ಒದಗಿಸಿರುವ ಕಾರಣ ಶ್ರೀ ಕ್ಷೇತ್ರ ಧರ್ಮಸ್ಥಳ ಬಸ್ ನಿಲ್ದಾಣದಲ್ಲಿ ಬಸ್ ಹತ್ತಲು ಪ್ರಯಾಣಿಕರ ಹರ ಸಾಹಸಪಡುವಂತಾಗಿದೆ.
ಬಸ್ ನ ವಿಂಡೋ ಸೀಟ್ ಕಾಯ್ದಿರಿಸಲು ಪ್ರಯಾಣಿಕರು ಬಸ್ ನ ಕಿಟಕಿ ರಾಡ್ ಕಿತ್ತು ಹಾಕಿದ ಘಟನೆ ನಡೆದಿದೆ. ಬಸ್ ಸೀಟ್ ಬಳಿಯ ರಾಡ್ ಕಿತ್ತು ಹಾಕಿ ಸೀಟ್ ಗಾಗಿ ಕಿತ್ತಾಟ ನಡೆಸಿದ್ದಾರೆ.
ಧರ್ಮಸ್ಥಳ ಕ್ಷೇತ್ರಕ್ಕೆ ಭಾರಿ ಸಂಖ್ಯೆಯಲ್ಲಿ ಮಹಿಳಾ ಭಕ್ತರು ಆಗಮಿಸಿದ್ದು. ಬಸ್ ನಿಲ್ದಾಣದಲ್ಲಿ ಬಸ್ ಹತ್ತಲು ನೂಕಾಟ-ತಳ್ಳಾಟ ನಡೆಸುತ್ತಿದ್ದಾರೆ. ಹಲವು ಊರುಗಳಿಗೆ ಪ್ರತೀ ಐದು ನಿಮಿಷಕ್ಕೊಂದು ಬಸ್ ಇದ್ದರೂ ಭಾರೀ ಜನಜಂಗುಳಿ ಕಂಡುಬಂದಿದೆ. ನಿಂತುಕೊಂಡೇ ಪ್ರಯಾಣ ಮಾಡುತ್ತಿರುವ ದೃಶ್ಯ ಸಾಮಾನ್ಯವಾಗಿದೆ.