ಬೆಳ್ತಂಗಡಿ: ತಾಲೂಕಿನ ನಡ ಗ್ರಾಮದ ಇತಿಹಾಸ ಪ್ರಸಿದ್ಧ ಗಡಾಯಿಕಲ್ಲು ಚಾರಣಕ್ಕೆ ತಾತ್ಕಾಲಿಕ ನಿಷೇಧ ಹೇರಲಾಗಿದೆ.
ಪ್ರಸ್ತುತ ವಿಪರೀತ ಮಳೆ ಇದ್ದು, ಕಲ್ಲುಗಳಿಂದ ಆವೃತವಾಗಿರುವ ಈ ಸ್ಥಳ ಜಾರುವ ಪ್ರದೇಶವಾಗಿದೆ.
ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ವ್ಯಾಪ್ತಿಯಲ್ಲಿರುವ ಗಡಾಯಿ ಕಲ್ಲಿಗೆ ಜು.7ರಿಂದ ಮುಂದಿನ ಆದೇಶದ ತನಕ ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ ಎಂದು ವನ್ಯ ಜೀವಿ ವಿಭಾಗದ ಬೆಳ್ತಂಗಡಿ ಆರ್ ಎಫ್ ಒ ಸ್ವಾತಿ ತಿಳಿಸಿದ್ದಾರೆ.