ಮಂಗಳೂರು

ಮಂಗಳೂರು ವಿವಿಯಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಿಯೇ ಮಾಡ್ತೇವೆ: ಪ್ರಭಾಕರ್ ಭಟ್

ಮಂಗಳೂರು: ಮಂಗಳೂರು ವಿಶ್ವ ವಿದ್ಯಾನಿಲಯದಲ್ಲಿ ಗಣಪತಿ ಕೂರಿಸುವ ವಿಚಾರದಲ್ಲಿ ವಿವಾದವೊಂದು ಎದ್ದಿದೆ. ವಿವಿಯಲ್ಲಿ ಕಳೆದ 40 ವರ್ಷಗಳಿಂದ ಗಣೇಶೋತ್ಸವ ನಡೀತಿದೆ. ಕಳೆದ 2 ವರ್ಷಗಳಿಂದ ವಿವಿಯ ಮಂಗಳಾ ಆಡಿಟೋರಿಯಂನಲ್ಲೇ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸಲಾಗುತ್ತಿದೆ. ಆದ್ರೆ ಈ ಬಾರಿ ವಿವಿಯ ಮಂಗಳಾ ಆಡಿಟೋರಿಯಂನಲ್ಲಿ ಗಣೇಶೋತ್ಸವ ಆಚರಣೆಗೆ ವಿಘ್ನ ಎದುರಾಗಿದೆ.

ವಿವಿ ಉಪಕುಲಪತಿ ಜಯರಾಜ್ ಆಮೀನ್ ಅವರು ವಿವಿಯ ಮಂಗಳಾ ಆಡಿಟೋರಿಯಂನಲ್ಲಿ ಗಣೇಶೋತ್ಸವ ಆಚರಣೆಗೆ ನಿರಾಕರಿಸಿದ್ದರು. ವಿವಾದದ ಬಳಿಕ ಹಾಸ್ಟೆಲ್ ವಾರ್ಡನ್ ಗಳ ಉಸ್ತುವಾರಿಯಲ್ಲಿ ಗಣೇಶೋತ್ಸವ ನಡೆಸಲು ಉಪಕುಲಪತಿ, ಹಲವು ಕಂಡೀಷನ್ ಹಾಕಿ ಅನುಮತಿ ನೀಡಿದ್ದರು.

ಆದ್ರೆ, ಸೆಪ್ಟೆಂಬರ್ 19ರಂದು ಮಂಗಳೂರು ವಿವಿಯಲ್ಲಿ ಗಣೇಶನ ಪ್ರತಿಷ್ಠಾಪನೆ ಮಾಡಿಯೇ ಮಾಡ್ತೇವೆ ಎಂದು ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಸವಾಲು ಹಾಕಿದ್ದಾರೆ.

ಮಂಗಳೂರು ವಿವಿ ಉಪಕುಲಪತಿ ನಡೆ ಖಂಡಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಮಾತನಾಡಿದ ಕಲ್ಲಡ್ಕ ಪ್ರಭಾಕರ್ ಭಟ್, ನಮಗೆ ಈಗ ಸಮಸ್ಯೆ ಬಂದಿರುವುದು ಕಾಂಗ್ರೆಸ್ ನಿಂದ. ಕಾಂಗ್ರೆಸ್ ನಮ್ಮನ್ನ ನಿರ್ವೀರ್ಯರನ್ನಾಗಿ, ಹೇಡಿಗಳನ್ನಾಗಿ ಮಾಡಿತು. ಈಗಲೂ ಪಾಕಿಸ್ತಾನ ಜಿಂದಾಬಾದ್ ಹೇಳುವವರು ಇದಾರೆ. ಅವರಿಗೆ ಕುಮ್ಮಕ್ಕು ಕೊಡುವವರು ಇದ್ದಾರೆ. ನಾವು ಸೆ.19 ರಂದು ಮಂಗಳೂರು ವಿವಿಯಲ್ಲಿ ಗಣೇಶನ ಪ್ರತಿಷ್ಠಾಪನೆ ಮಾಡಿಯೇ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

Ashitha S

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

4 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

5 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

5 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

5 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

6 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

6 hours ago