ಮುಲ್ಕಿ: ಮನುಷ್ಯ ವಿದ್ಯಾವಂತನಾದರೆ ಸ್ವಾಭಿಮಾನದ ಬದುಕಿನೊಂದಿಗೆ ಸಮಾಜವು ಗುರುತಿಸುವ ವ್ಯಕ್ತಿಯಾಗಿ ಹೊರ ಹೊಮ್ಮಲು ಸಾಧ್ಯ ಎಂದು ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಎಚ್ ವಸಂತ್ ಬೇರ್ನಾಡ್ ಹೇಳಿದರು.
ಅವರು ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ವತಿಯಿಂದ ನಡೆದ ಮಹಾಸಭೆಯಲ್ಲಿ ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ಯಲ್ಲಿ ಗರಿಷ್ಠ ಅಂಕಗಳಿಸಿದ ಸದಸ್ಯರ ಮಕ್ಕಳನ್ನು ಅಭಿನಂದಿಸಿ ಮಾತನಾಡಿದರು.
ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯು ವ್ಯವಹಾರ ಮಾಡುವುದರೊಂದಿಗೆ ಸಾಮಾಜಿಕ ಕಳಕಳಿ ಹೊಂದಿದೆ. ವೃತ್ತಿಪರ ತರಬೇತಿ, ಆರೋಗ್ಯ ಶಿಬಿರ ಮುಂತಾದ ಕಾರ್ಯಕ್ರಮಗಳ ಜೊತೆಗೆ ಇದೀಗ ವಿದ್ಯಾರ್ಥಿಗಳನ್ನು ಕೂಡ ಗುರುತಿಸುವ ಕಾರ್ಯವನ್ನು ಸೊಸೈಟಿ ಮಾಡುತ್ತಿದೆ ಎಂದರು.
ಇದೇ ವೇಳೆ ಸದಸ್ಯರ ಮಕ್ಕಳುಗಳಾದ ಹನೀಷ ಎಚ್ ಪುತ್ರನ್ಕ್ಯಾ, ಲ್ವಿನ್ ಸಾಮುವೇಲ್ ಬೆರ್ನಾಡ್, ವಿಲೋನ ಶರಿಲ್, ಸಂತೋಷ್ ಜೋಸ್ವಾ ಕರ್ಕಡ, ಆಯಿಷತ್ ಜಿಯಾನ ಅವರನ್ನು ಸನ್ಮಾನಿಸಲಾಯಿತು. ಇದರೊಂದಿಗೆ ಸಂಗದ ಸದಸ್ಯರಾದ ನೌಕನೆಲೆಯಲ್ಲಿ ಸೇವೆ ಸಲ್ಲಿಸಿದ ಅರುಣ್ ಶೆಟ್ಟಿ ಅವರನ್ನು ಗೌರವಿಸಲಾಯಿತು.
ವೇದಿಕೆಯಲ್ಲಿ ಬ್ಯಾಂಕಿನ ಹಿರಿಯ ಸಿಬ್ಬಂದಿ ಅಕ್ಷತಾ ಎಮ್ ಶೆಟ್ಟಿ, ನಿರ್ದೇಶಕರುಗಳಾದ ಗಣೇಶ್ ಅಮೀನ್ ಸಂಕಮಾರ್, ಧನಂಜಯ ಮಟ್ಟು, ಗೌತಮ್ ಜೈನ್, ಶರತ್ ಶೆಟ್ಟಿ ಪಂಚವಟಿ, ಉಮಾನಾಥ ಜೆ ಶೆಟ್ಟಿಗಾರ್, ಜೈಕೃಷ್ಣ ಕೋಟ್ಯಾನ್, ಗಣೇಶ್ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.