ಬಂಟ್ವಾಳ: ಎರಡು ದಿನಗಳ ಹಿಂದೆ ಬಂಟ್ವಾಳ ತಾಲೂಕಿನ ಪಾಂಡವರಕಲ್ಲು ಎಂಬಲ್ಲಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿ ಉಪ್ಪಿನಂಗಡಿಯಲ್ಲಿ ಪತ್ತೆಯಾಗಿದ್ದಾಳೆ.
ಈ ಬಗ್ಗೆ ಬಾಲಕಿಯ ಹೆತ್ತವರು ನೀಡಿದ ದೂರಿನಂತೆ ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಾಗಿತ್ತು. ಕಾರ್ಯಚರಣೆ ನಡೆಸಿದ ಪುಂಜಾಲಕಟ್ಟೆ ಪೊಲೀಸರು ಬಾಲಕಿಯನ್ನು ಉಪ್ಪಿನಂಗಡಿಯಲ್ಲಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದು, ಠಾಣೆಗೆ ಕರೆದುಕೊಂಡು ಬಂದಿದ್ದಾರೆ.
ಅಪಹರಣ ಶಂಕೆ..!
ಬಾಲಕಿಯ ನೆರೆ ಮನೆಯ ನೌಶಾದ್ ಎಂಬಾತ ಬಾಲಕಿಯನ್ನು ಪುಸಲಾಯಿಸಿ ಶುಕ್ರವಾರ ಅಪಹರಿಸಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಶನಿವಾರ ರಾತ್ರಿ ಅತ ಬಾಲಕಿಯನ್ನು ಉಪ್ಪಿನಂಗಡಿಯಲ್ಲಿ ಬಿಟ್ಟು ಮೈಸೂರಿಗೆ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ.ಈ ಬಗ್ಗೆ ಖಚಿತ ಮಾಹಿತಿ ಪಡೆದ ಪುಂಜಾಲಕಟ್ಟೆ ಠಾಣೆಯ ಎಸ್ ಐ ಸುತೇಶ್ ಮತ್ತವರ ಸಿಬ್ಬಂದಿಗಳನ್ನು ಪತ್ತೆ ಹಚ್ಚಿ ಠಾಣೆಗೆ ಕರೆ ತಂದಿದ್ದಾರೆ.
ಯುವತಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಮನೆಮಂದಿ ಆಕೆಯನ್ನು ಮನೆಗೆ ಕರೆದುಕೊಂಡು ಹೋಗಲು ನಿರಾಕರಿಸಿದ ಹಿನ್ನಲೆಯಲ್ಲಿ ಬಾಲಕಿಯನ್ನು ಮೂಡಬಿದ್ರೆ ಯಲ್ಲಿರುವ ಹೆಣ್ಮಕ್ಕಳ ರಿಮಾಂಡ್ ಹೋಂಗೆ ಒಪ್ಪಿಸಲಾಗಿದೆ ಎಂದು ತಿಳಿದು ಬಂದಿದೆ. ಘಟನೆ ಕುರಿತಾಗಿ ಮಕ್ಕಳ ಕಲ್ಯಾಣ ಸಮಿತಿಗೂ ಪೊಲೀಸರು ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.