ಬೆಳ್ತಂಗಡಿ: ಬಿಜೆಪಿಯ ವಿಜಯ ಸಂಕಲ್ಪಯಾತ್ರೆಯಲ್ಲಿ ಭಾಗವಹಿಸಲು ಬಂದಿದ್ದ ಗೋವಾ ಸಿ.ಎಂ. ಪ್ರಮೋದ್ ಸಾವಂತ್ ಆದಿತ್ಯವಾರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.
ಬಳಿಕ ಅವರು ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಾ| ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದರು. ಇದಕ್ಕೂ ಮೊದಲು ಧರ್ಮಸ್ಥಳ ಹೆಲಿಪ್ಯಾಡ್ನಲ್ಲಿ ಬಂದಿಳಿದ ಮುಖ್ಯಮಂತ್ರಿಗಳನ್ನು ಧರ್ಮಸ್ಥಳ ಹರ್ಷೇಂದ್ರ ಕುಮಾರ್ ಸ್ವಾಗತಿಸಿದರು.
ಶಾಸಕ ಹರೀಶ ಪೂಂಜ, ಕ್ಷೇತ್ರದ ಪಾರುಪತ್ಯೆಗಾರ ಲಕ್ಷ್ಮೀನಾರಾಯಣ ರಾವ್, ಕಚೇರಿ ನಿರ್ವಾಹಕ ಪಾರ್ಶ್ವನಾಥ್ ಇದ್ದರು.