News Karnataka Kannada
Sunday, April 28 2024
ಸಮುದಾಯ

ಅಂತ:ಕರಣ ಶುದ್ಧಿಯಿಂದ ದೇವರ ಅನುಗ್ರಹ ಪ್ರಾಪ್ತಿ: ದೇವು ಮೂಲ್ಯಣ್ಣ ಅಭಿಪ್ರಾಯ

God's grace is attained when one is engaged in temples with karana shuddhi - Devu Moolyanna
Photo Credit : News Kannada

ಬಂಟ್ವಾಳ: ಅಂತ:ಕರಣ ಶುದ್ಧಿಯಿಂದ  ದೈವ, ದೇವಸ್ಥಾನಗಳಲ್ಲಿ ಕಾರ್ಯಗಳಲ್ಲಿ ತೊಡಗಿಸಿಕೊಂಡಾಗ ದೇವರ ಅನುಗ್ರಹ ಪ್ರಾಪ್ತಿಯಾಗುವುದು ಎಂದು ಉಳಿಯ ಧರ್ಮರಸು ಉಳ್ಳಾಲ್ತಿ ಕ್ಷೇತ್ರದ ಧರ್ಮದರ್ಶಿ ದೇವು ಮೂಲ್ಯಣ್ಣ  ಹೇಳಿದರು.

ಸುಮಾರು 1ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಬಂಟ್ವಾಳ ತಾಲೂಕು ಕಾಡಬೆಟ್ಟು ಗ್ರಾಮದ ಪಿಲಿಂಗಾಲು ಶ್ರೀ ಗಾಯತ್ರಿದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಗುರುವಾರ ನಡೆದ ಧಾರ್ಮಿಕ ಸಭೆಯನ್ನು ಉದ್ಘಾಟಿಸಿ  ಮಾತನಾಡಿದರು.

ಮುಖ್ಯ ಅತಿಥಿಯಾಗಿದ್ದ ಮಾಜಿ ಸಚಿವ ಬಿ.ರಮಾನಾಥ ರೈ,  ದೇಗುಲದ ಧರ್ಮದರ್ಶಿ ಕೆ.ಎಸ್.ಪಂಡಿತ್ ಅವರ ಸಾಧನೆಯಿಂದ ಕ್ಷೇತ್ರದಲ್ಲಿ ಗಾಯತ್ರಿ ದೇವಿ ನೆಲೆಯಾಗಿದ್ದಾಳೆ ಎಂದರು.  ದೇವಸ್ಥಾನಗಳ ಅಭಿವೃದ್ಧಿಯಿಂದ ಗ್ರಾಮ ಸುಭಿಕ್ಷವಾಗುವುದು ಎಂದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದ.ಕ.ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಅವರು ಮಾತನಾಡಿ, ಊರ ದೇವಸ್ಥಾನದ ಅಭಿವೃದ್ಧಿಯಲ್ಲಿ ಪ್ರತಿಯೊಬ್ಬರೂ ತೊಡಗಿಸಿಕೊಳ್ಳಬೇಕು ಎಂದರು.ಬೆಂಗಳೂರು ಅಖಿಲ ಕರ್ನಾಟಕ ಗಾಣಿಗರ ಸಂಘದ ರಾಜ್ಯಾಧ್ಯಕ್ಷ ರಾಜಶೇಖರ ಗಾಣಿಗ, ಧ.ಗ್ರಾ.ಯೋಜನೆ ಬಂಟ್ವಾಳ ತಾ.ಯೋಜನಾಧಿಕಾರಿ ಜಯಾನಂದ, ಮುಂಬಯಿ ಉದ್ಯಮಿ ನಿತ್ಯಾನಂದ ಪೂಜಾರಿ ಕೆಂತಲೆ, ಬಂಟ್ವಾಳ ತಾ. ವಿಶ್ವಕರ್ಮಸಮಾಜ ಸೇವಾ ಸಂಘದ ಅಧ್ಯಕ್ಷ ಸುಧಾಕರ ಆಚಾರ್ಯ, ಶ್ರೀ ಕ್ಷೇತ್ರ ಕಾರಿಂಜದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಪುಳಿಮಜಲು, ಕಾವಳಪಡೂರು ಗ್ರಾ.ಪಂ.ಅಧ್ಯಕ್ಷೆ ರಜನಿ ಬಾಬು ಕುಲಾಲ್, ಸಫಲ ಕ್ರೆಡಿಟ್ ಸೊಸೈಟಿ ಅಧ್ಯಕ್ಷ ಸಂಜೀವ ಅಡ್ಯಾರ್, ಎಡಪದವು ಗಾಣಿಗರ ಸಂಘದ ಅಧ್ಯಕ್ಷ ಭಾಸ್ಕರ ಎಡಪದವು, ದೇವಸ್ಥಾನದ ಆಡಳಿತ ಧರ್ಮದರ್ಶಿ ಕೆ.ಎಸ್.ಪಂಡಿತ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ.ಬಾಬು ಸಫಲ್ಯ, ಉಪಾಧ್ಯಕ್ಷ ಬೂಬ ಸಫಲ್ಯ, ಅರ್ಚಕ ಶ್ರೀಪತಿ ಉಡುಪ ಕೆಳಮಂಗಲ ವೇದಿಕೆಯಲ್ಲಿದ್ದರು. ಜೀರ್ಣೊದ್ಧಾರ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ ಗಳು, ಸದಸ್ಯರು ಉಪಸ್ಥಿತರಿದ್ದರು.

ಬ್ರಹ್ಮಕಲಶೋತ್ಸವ ಅಧ್ಯಕ್ಷ ಎಂ.ತುಂಗಪ್ಪ ಬಂಗೇರ ಸ್ವಾಗತಿಸಿದರು. ಜೀರ್ಣೋದ್ಧಾರ ಸಮಿತಿ ಪ್ರ.ಕಾರ್ಯದರ್ಶಿ ನಾಗೇಶ್ ಕಲ್ಲಡ್ಕ, ಪ್ರಸ್ತಾವಿಸಿದರು. ಪ್ರಧಾನ ಕಾರ್ಯದರ್ಶಿ ಮೋಹನ್ ಕೆ.ಶ್ರೀಯಾನ್ ರಾಯಿ ವಂದಿಸಿದರು. ಬೆಳಗ್ಗೆ ಶ್ರೀ ಮಹಾಗಣಪತಿ ಪ್ರತಿಷ್ಠೆ, ಶ್ರೀ ರಾಘವೇಂದ್ರಗುರು ಬಿಂಬ ಪ್ರತಿಷ್ಠೆ, ಪರಿವಾರ ದೈವಗಳ ಪ್ರತಿಷ್ಠೆ ನಡೆಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು