ಬೆಳ್ತಂಗಡಿ, ಮೇ 23: ಕರ್ನಾಟಕದಲ್ಲಿ 2012 ರಲ್ಲಿ ಇದ್ದ ಬಿಜೆಪಿ ಸರಕಾರ ಡಾ.ವಿ.ಎಸ್.ಆಚಾರ್ ಅವರ ವಿಶೇಷ ಮುತುವರ್ಜಿಯಲ್ಲಿ ಕರಾವಳಿಯ ಮೂಲಗೇಣಿದಾರರಿಗೆ ಸಂಪೂರ್ಣ ಹಕ್ಕು ನೀಡುವ ಕುರಿತು ಕರ್ನಾಟಕ ಕಾಯ್ದೆ ಸಂಖ್ಯೆ 24/2012 ನ್ನು ರೂಪಿಸಿತ್ತು. ಕರ್ನಾಟಕ ಮೂಲಗೇಣಿ ಅಥವಾ ಒಳಮೂಲಗೇಣಿದಾರರಿಗೆ ಸಂಪೂರ್ಣ ಮಾಲಕತ್ವ ಪ್ರದಾನ ಮಾಡುವ ಅಧಿನಿಯಮ ಸಿಂಧುತ್ವವನ್ನು ಪ್ರಶ್ನಿಸಿ ರಿಟ್ ಅರ್ಜಿ ಸಂಖ್ಯೆ 11158/2013 ಮತ್ತು ಇತರ ಅರ್ಜಿಗಳನ್ನು ಹೈಕೋರ್ಟ್ ಗೆ ಮೂಲಿದಾರರು ಸಲ್ಲಿಸಿದ್ದರು .
ರಾಜ್ಯ ಸರಕಾರದ ಈ ಅಧಿನಿಯಮ ಮಾಡುವ ಅಧಿಕಾರವನ್ನು ಪ್ರಶ್ನಿಸಿ, ಮೂಲಿದಾರರು ತಮ್ಮ ಮೂಲಭೂತ ಹಕ್ಕುಗಳಿಗೆ ಇದು ವಿರುದ್ಧವಾಗಿದೆ ಎಂದು ಪ್ರತಿಪಾದನೆ ಮಾಡಿದರು. ಈ ರಿಟ್ ಅರ್ಜಿಗಳನ್ನು ಉಚ್ಚ ನ್ಯಾಯಾಲಯವು ವಜಾಗೊಳಿಸಿ ಸರಕಾರಕ್ಕೆ ಈ ಕುರಿತು ಅಧಿನಿಯಮವನ್ನು ಮಾಡುವ ಅಧಿಕಾರವಿದೆ ಎಂದು ತೀರ್ಪು ನೀಡಿದೆ.
ಇದರಿಂದಾಗಿ ದಶಕಗಳಿಂದ ಸಂಪೂರ್ಣ ಹಕ್ಕಿಗಾಗಿ ಕಾಯುತ್ತಿರುವ ಕರಾವಳಿಯ ಸಾವಿರಾರು ಮೂಲಗೇಣಿದಾರರಿಗೆ ಅಧಿಕಾರ ಸಿಗುವ ದಿಕ್ಕಿನಲ್ಲಿ ದಾರಿ ಸುಗಮವಾಗಿದೆ. ಸರಕಾರ ತಕ್ಷಣವೇ ಕಾರ್ಯಪ್ರವೃತ್ತರಾಗಿ ಮುಂದಿನ ಮೊದಲ ಅಧಿವೇಶನದಲ್ಲಿಯೇ ಪರಿಹಾರಕ್ಕಾಗಿ ಚಾತಕಪಕ್ಷಿಯಂತೆ ಕಾಯುತ್ತಿರುವ ಮೂಲ ಗೇಣಿದಾರರಿಗೆ ನ್ಯಾಯ ನೀಡುವಲ್ಲಿ ಕಾರ್ಯಪ್ರವೃತ್ತರಾಗಬೇಕು ಮತ್ತು ಯಾವುದೇ ಕಾರಣಕ್ಕೆ ವಿಳಂಬನೀತಿ ಅನುಸರಿಸದೆ ತಕ್ಷಣ ಜಾರಿಗೊಳಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ಆಗ್ರಹಿಸಿದ್ದಾರೆ.
ಎರಡು ರಾಟ್ವೀಲರ್ ನಾಯಿಗಳು ಐದು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಪರಿಣಾಮ ಬಾಲಕಿ ಗಂಭೀರ ಗಾಯಗೊಂಡ ಘಟನೆ ಚೆನ್ನೈನ…
ಬಿರು ಬಿಸಿಲಿನ ಬೇಗೆಗೆ ಜನರೇ ತತ್ತರಿಸಿ ಹೋಗುತ್ತಿದ್ದು, ಜಾನುವಾರುಗಳ ಮೂಕ ರೋಧನೆ ಹೇಳ ತೀರದ್ದಾಗಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ…
ಬೆಂಗಳೂರಿನ ಅಂಗವಿಕಲರ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ ರಾಜ್ಯ ಆಯುಕ್ತರಾದ ದಾಸ ಸೂರ್ಯವಂಶಿ ಅವರು ಇತ್ತೀಚಿಗೆ ಬೀದರ್ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು…
ಪ್ರಧಾನಮಂತ್ರಿ ನರೇಂದ್ರ ಮೋದಿ ನಾಳೆ ಅಹಮದಾಬಾದ್ಗೆ ಭೇಟಿ ನೀಡಲಿದ್ದು, ಅಲ್ಲಿನ ಶಾಲೆಯೊಂದರಲ್ಲಿ ಮತ ಚಲಾಯಿಸಲಿದ್ದಾರೆ.
ಬರಗಾಲದಲ್ಲಿ ಕೆಲಸವಿಲ್ಲದೆ ಮಹಾನಗರಗಳಿಗೆ ಗುಳೆ ಹೋಗುವಂತಹ ಪರಿಸ್ಥಿತಿ ಎದುರಿಸುತ್ತಿದ್ದ ತಾಲ್ಲೂಕಿನ ನಿರುದ್ಯೋಗಿ ಹಾಗೂ ಕೂಲಿಕಾರರಿಗೆ ಉದ್ಯೋಗ ಖಾತ್ರಿ ಕೆಲಸ ಆಸರೆಯಾಗಿದೆ.
ಧರಣಿ ನಿರತ 108 ಆ್ಯಂಬುಲೆನ್ಸ್ ಚಾಲಕರಿಗೆ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದು, ಚುನಾವಣಾ ನೀತಿ ಸಂಹಿತೆ ಇರುವುದರಿಂದ ಮುಷ್ಕರ…