ಮೂಡುಬಿದಿರೆ: ಚಿಕ್ಕೋಡಿಯಲ್ಲಿ ಜೈನ ಮುನಿಗಳನ್ನು ಹತ್ಯೆ ಮಾಡಿರುವುದು ಖೇದಕರ. ಈ ಸುದ್ದಿ ಕೇಳಿ ನಮಗೆ ದುಃಖವಾಗಿದೆ ಎಂದು ಮೂಡುಬಿದ್ರೆ ಜೈನ ಮಠದ ಡಾ. ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ ಹೇಳಿಕೆ ನೀಡಿದ್ದಾರೆ.
ಸಾಧು ಸಂತರನ್ನು ಕೊಲೆ ಮಾಡುವ ಕೃತ್ಯ ದೇಶದಲ್ಲಿ ಹೆಚ್ಚುತ್ತಿದೆ. ಮಹಾರಾಷ್ಟ್ರದಲ್ಲಿ ಮಾತ್ರ ಇದ್ದ ಈ ರೀತಿಯ ಘಟನೆ ಕರ್ನಾಟಕದಲ್ಲಿ ನಡೆದಿರುವುದು ದುಃಖಕರ. ಸಂತ ವಲಯದಲ್ಲಿ ಇಂತಹ ಘಟನೆಗಳು ಆತಂಕವನ್ನು ಹೆಚ್ಚುವಂತೆ ಮಾಡಿದೆ. ಹಾಗಾಗಿ ಧಾರ್ಮಿಕ ವಲಯದ ಸಂತರಿಗೆ ಸರ್ಕಾರ ರಕ್ಷಣೆ ಕೊಡಬೇಕು.
ಪವಿತ್ರ ಧಾರ್ಮಿಕ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸುವುದು ಕಡ್ಡಾಯ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಿದ್ದಕ್ಕೆ ಪೊಲೀಸರನ್ನು ಅಭಿನಂದಿಸುತ್ತೇವೆ ಎಂದು ಸ್ವಾಮೀಜಿ ತಿಳಿಸಿದ್ದಾರೆ.