News Karnataka Kannada
Thursday, May 02 2024
ಮಂಗಳೂರು

ಕುಕ್ಕೆ ಸುಬ್ರಮಣ್ಯ ದೇವರ ದರುಶನ ಪಡೆದ ರಾಜ್ಯಪಾಲರಾದ ಥಾವರ್ ಚಂದ್ ಗಹ್ಲೋಟ್

Governor Thaawar Chand Gehlot receives blessings of Lord Kukke Subramanya
Photo Credit : News Kannada

ಸುಬ್ರಹ್ಮಣ್ಯ: ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗಹ್ಲೋಟ್ ಅವರು ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಥಾವರ್ ಚಂದ್ ಗೆಹ್ಲೋಟ್ ಪತ್ನಿ ಅನಿತಾ ಗೆಹ್ಲೋಟ್ ಹಾಗೂ ಕುಟುಂಬಸ್ಥರೊಂದಿಗೆ ಫೆ.14ರಂದು ಸಂಜೆ ಸುಮಾರು 6.00 ಗಂಟೆಗೆ ಕ್ಷೇತ್ರಕ್ಕೆ ಆಗಮಿಸಿ ಶ್ರೀ ದೇವರ ದರುಶನ ಪಡೆದರು.

ಈ ಸಮಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್, ಸಿಇಓ ಕುಮಾರ್, ಜಿಲ್ಲಾ ಎಸ್ಪಿ ಡಾ.ವಿಕ್ರಮ್ ಆಮ್ಟೇ, ಸುಬ್ರಹ್ಮಣ್ಯ ಕಾರ್ಯನಿರ್ವಣಾ ಅಧಿಕಾರಿ ಡಾ.ನಿಂಗಯ್ಯ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಸೇರಿ ಪ್ರಮುಖರು ಉಪಸ್ಥಿತರಿದ್ದರು.

ಪೊಲೀಸ್ ಇಲಾಖೆಯಿಂದ ರಾಜ್ಯಪಾಲಾರಿಗೆ ಎಲ್ಲಾ ರೀತಿಯ ಭದ್ರತೆಯನ್ನು ಕೈಗೊಳ್ಳಲಾಗಿತ್ತು , ಸುಮಾರು 2 ಗಂಟೆಗಳ ಕಾಲ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ಇರಲಿಲ್ಲ, ರಾಜ್ಯಪಾಲರು ದರ್ಶನ ಪಡೆದು ಮರಳಿದ ಬಳಿಕ ಎಂದಿನಂತೆ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಲಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು