News Karnataka Kannada
Thursday, May 02 2024
ಮಂಗಳೂರು

ಗೋ ಅಕ್ರಮ ಸಾಗಾಟ ತಡೆಯದಿದ್ದರೆ ತಡೆಯುವುದು ಹೇಗೆಂದು ಗೊತ್ತಿದೆ: ಬಜರಂಗದಳ ಮುಖಂಡ ಸುನೀಲ್‌

Govt knows how to stop cow smuggling if it doesn't stop it: Bajrang Dal
Photo Credit : News Kannada

ಮಂಗಳೂರು: ಜೂನ್ 29ರಂದು ಮುಸ್ಲಿಮರ ಪವಿತ್ರ ಹಬ್ಬ ಬಕ್ರೀದ್ ಆಚರಣೆ ನಡೆಯಲಿದ್ದು, ಕುರ್ಬಾನಿ ಹೆಸರಿನಲ್ಲಿ ಸಾವಿರಾರು ಗೋವುಗಳ ಹತ್ಯೆಯಾಗುವ ಆತಂಕವಿದೆ. ಈ ನಿಟ್ಟಿನಲ್ಲಿ ಅಕ್ರಮ ಗೋಸಾಗಾಣಿಕೆ, ಗೋವುಗಳ ಬಲಿಯನ್ನು ತಡೆಯಬೇಕು ಎಂದು ಬಜರಂಗ ದಳ ಆಗ್ರಹಿಸಿದೆ.

ಬಕ್ರಿದ್ ಸಂದರ್ಭದಲ್ಲಿ ಗೋಹತ್ಯೆ ಗೋ ಸಾಗಾಟ ಸರಕಾರ ತಡೆಯದಿದ್ದರೆ ನಮಗೆ ತಡೆಯಲು ಗೊತ್ತಿದೆ ಎಂದು ಎಚ್ಚರಿಕೆ ನೀಡಿದೆ.

ಈ ಬಗ್ಗೆ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಬಜರಂಗದಳ ದಕ್ಷಿಣ ಪ್ರಾಂತ ಸಂಚಾಲಕ ಸುನೀಲ್ ಕೆ.ಆರ್, ಕುರ್ಬಾನಿಗೆ ತಯಾರಿ ನಡೆಯುತ್ತಿರುವ ಬಗ್ಗೆ ಮಾಹಿತಿ ಬರುತ್ತಿದೆ.

ರಾಜ್ಯ ಸರ್ಕಾರ, ಜಿಲ್ಲಾಡಳಿತ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಅಕ್ರಮ ಗೋಸಾಗಾಣಿಕೆ, ಗೋವುಗಳ ಬಲಿಯನ್ನು ತಡೆಯಬೇಕು ಎಂದು ಆಗ್ರಹಿಸಿದರು. ಇಂದಿನಿಂದ (ಸೋಮವಾರ) ಜೂನ್ 30 ರವರೆಗೆ ಪ್ರಮುಖ ಸಾಗಾಟ ಸ್ಥಳಗಳಲ್ಲಿ ಚೆಕ್ ಪೋಸ್ಟ್ ತೆರೆಯಬೇಕು. ಗೋಸಾಗಾಟ ತಡೆಯಲು ವಿಶೇಷ ಪೊಲೀಸ್ ತಂಡ ರಚಿಸಬೇಕು ಎಂದು ತಿಳಿಸಿದರು.

ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಕನಸಿನಲ್ಲಿಯೂ ಬಜರಂಗದಳವೇ ಕಾಣುತ್ತಿದೆ. ಅದೇ ರೀತಿ ಸಚಿವ ಖರ್ಗೆ ಅವರು ಕೂಡ ಬಜರಂಗದಳ ಸೇರಿದಂತೆ ಹಿಂದು ಸಂಘಟನೆಗಳ ಕುರಿತು ಹಗುರವಾಗಿ ಮಾತನಾಡಬಾರದು. ಈ ಬಗ್ಗೆ ಸೂಕ್ತ ಸಂದರ್ಭದಲ್ಲಿ ಅವರಿಗೆ ಬಜರಂಗದಳ ತಕ್ಕ ಉತ್ತರ ಕೊಡುತ್ತದೆ ಎಂದರು.

ಮಂಗಳೂರಿನಲ್ಲಿ ಆ್ಯಂಟಿ ಕಮ್ಯೂನಲ್ ವಿಂಗ್ ರಚಿಸಿರುವುದು ಸಂತೋಷದ ವಿಚಾರ. ಆ್ಯಂಟಿ ಕಮ್ಯೂನಲ್ ವಿಂಗ್ ಮೂಲಕ ಗೋಹತ್ಯೆ, ಲವ್ ಜಿಹಾದ್ ನಿಲ್ಲಿಸುವ ಕಾರ್ಯ ಮಾಡಬೇಕು ಎಂದು ಒತ್ತಾಯಿಸಿದರು. ಆಗ ಮಾತ್ರ ಕೋಮು ಸಾಮರಸ್ಯ ಸಮಾಜದಲ್ಲಿ ನೆಲಸಲಿದೆ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು