News Karnataka Kannada
Saturday, April 27 2024
ಮಂಗಳೂರು

ಅಗ್ನಿವೀರ್‌ ನೌಕರರಿಗೆ ಮೂರು ತಿಂಗಳಿಂದ ವೇತನ ನೀಡದ ಸರ್ಕಾರ: ಕಾಮತ್‌ ಆರೋಪ

Govt not paying salaries to Agniveer employees for three months: Kamath
Photo Credit : Facebook

ಮಂಗಳೂರು: ಕಾಂಗ್ರೆಸ್ ಸರಕಾರ ಭ್ರಷ್ಟಾಚಾರ ಆರೋಪಗಳಿಗೆ ಉತ್ತರ ನೀಡಬೇಕು ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಆಗ್ರಹಿಸಿದರು.

ಮಂಗಳೂರಿನಲ್ಲಿ ಮಾತನಾಡಿದ ಅವರು ಕೃಷಿ ಸಚಿವರ ವಿರುದ್ಧ ಕೃಷಿ ಇಲಾಖೆ ಅಧಿಕಾರಿಗಳು ರಾಜ್ಯಪಾಲರಿಗೆ ಬರೆದು ದೂರು ದಾಖಲಿಸಿರುವುದು ಕಾಂಗ್ರೆಸ್ ಸರಕಾರ ಭ್ರಷ್ಟರ ಕೂಪವಾಗಿರುವುದಕ್ಕೆ ಸಾಕ್ಷಿ ನೀಡಿದೆ ಎಂದರು.

ಭ್ರಷ್ಟಾಚಾರವನ್ನು ಸಹಿಸುವುದಿಲ್ಲ ಎಂದು ಹೇಳಿಕೆ ನೀಡುತ್ತಿರುವ ಮುಖ್ಯಮಂತ್ರಿಗಳ ಕಾಲಬುಡದಲ್ಲಿಯೇ ಇಂತಹ ವ್ಯವಹಾರಗಳು ಹೇಗೆ ನಡೆಯುತ್ತಿವೆ ಎಂದು ಪ್ರಶ್ನಿಸಿದರು. ಉಡುಪಿ ಕಾಲೇಜು ವಾಶ್ ರೂಂ ವಿಡಿಯೋ ಪ್ರಕರಣವನ್ನು ಮುಚ್ಚಿ ಹಾಕಲು ಸರ್ಕಾರ ಯತ್ನಿಸುತ್ತಿದ್ದು, ಸ್ವಚ್ಛ ಆಡಳಿತ ನೀಡುವ ಬದಲು ವರ್ಗಾವಣೆ ದಂಧೆ ನಡೆಸುತ್ತಿದೆ ಎಂದು ಕಾಮತ್ ಆರೋಪಿಸಿದರು.

ಪ್ರತಿನಿತ್ಯ ಒಂದಲ್ಲ ಒಂದು ಇಲಾಖೆಯಿಂದ ವರ್ಗಾವಣೆ ಆದೇಶಗಳು ಬರುತ್ತಿವೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಹೆಬ್ರಿಯ ರಾಣಿ ಅಬ್ಬಕ್ಕ ಅಗ್ನಿವೀರ ತರಬೇತಿ ಕೇಂದ್ರದ ಹಾಸ್ಟೆಲ್‌ಗೆ ಸರಕಾರ ಅನುದಾನ ನೀಡುವುದನ್ನು ಸ್ಥಗಿತಗೊಳಿಸಿದೆ. ಗುತ್ತಿಗೆ ಆಧಾರದ ಮೇಲೆ ಹಾಸ್ಟೆಲ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಕಳೆದ ಮೂರು ತಿಂಗಳಿಂದ ವೇತನ ಪಾವತಿಯಾಗಿಲ್ಲ ಎಂದರು. ಇಂತಹ ಕ್ರಮಗಳ ಮೂಲಕ ರಾಜ್ಯ ಸರ್ಕಾರ ಅಗ್ನಿವೀರ್ ಯೋಜನೆಗೆ ಅಡ್ಡಿಪಡಿಸುತ್ತಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು