Categories: ಮಂಗಳೂರು

ಮಂಗಳೂರು: ವಿಮಾನ ನಿಲ್ದಾಣಕ್ಕೆ ಗನ್ ಮೌಂಟೆಡ್ ಬುಲೆಟ್ ನಿರೋಧಕ ವಾಹನ ಕೊಡುಗೆ

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದ ವತಿಯಿಂದ ಜುಲೈ 26 ಕಾರ್ಗಿಲ್ ವಿಜಯ ದಿವಸದ ಆಚರಣೆಯ ಭಾಗವಾಗಿ ಅಲ್ಲಿನ ಕೇಂದ್ರೀಯ ಕೈಗಾರಿಕಾ ದಳದ ಏವಿಯೇಷನ್ ಸೆಕ್ಯುರಿಟಿ ಗ್ರೂಪಿಗೆ ಬುಲೆಟ್ ನಿರೋಧಕ ವಾಹನವನ್ನು ಕೊಡುಗೆಯಾಗಿ ನೀಡಿದೆ.

ಈ ಕ್ರಮವನ್ನು ಶ್ಲಾಘಿಸಿದ ಚೆನ್ನೈ ಸಿಐ ಎಸ್ ಎಫ್ ಡಿಜಿ ಐ ಏರ್ ಪೋರ್ಟ್ ಸೇತುರಾಮನ್ ಸೆಲ್ವಂ ಅವರು ಬುಲೆಟ್ ನಿರೋಧಕ ವಾಹನ ನೀಡುವುದರಿಂದ ಇದೊಂದು ಚರಿತ್ರಾರ್ಹ ದಿನವಾಗುತ್ತದೆ ತಮ್ಮ ಕರ್ತವ್ಯದ ವೇಳೆ ಮತ್ತಷ್ಟು ಧೈರ್ಯ ಆತ್ಮವಿಶ್ವಾಸದಿಂದ ಕಾರ್ಯ ನಿರ್ವಹಿಸಲು ಇದು ನೆರವಾಗಲಿದೆ ಎಂದರು .ಅತೀ ಸೂಕ್ಷ್ಮವಲ್ಲದ ವಿಮಾನ ನಿಲ್ದಾಣಗಳಲ್ಲಿ ಮಂಗಳೂರಿಗೆ ಮೊದಲ ಬಾರಿಗೆ ವಾಹನವನ್ನು ನೀಡಲಾಗುತ್ತಿದೆ ಮುಂಬಯಿ ಬೆಂಗಳೂರು ದಿಲ್ಲಿ ಹೈದರಾಬಾದ್ ವಿಮಾನ ನಿಲ್ದಾಣಗಳಲ್ಲಿ ಈಗಾಗಲೇ ಇಂಥ ವಾಹನಗಳಿವೆ.

ಮಂಗಳೂರು ವಿಮಾನ ನಿಲ್ದಾಣ ತನ್ನೆಲ್ಲಾ ಅಗತ್ಯವಿರುವ ಸೆಕ್ಯುರಿಟಿ ಮಾನದಂಡಗಳನ್ನು ಪೂರೈಸುತ್ತಿದೆ ಅದರಂತೆ ಸಿ ಐ ಎಸ್ ಎಫ್ ನ ಎಎಸ್ ಜಿ ಅವರಿಗೆ ಆದ್ಯತೆ ನೀಡುವ ಮೂಲಕ ಅವರ ನೈತಿಕ ಸ್ಥೈರ್ಯ ಹೆಚ್ಚಿಸುವ ಕೆಲಸ ಮಾಡಿದ್ದೇವೆ ಲೈಟ್ ಮಷಿನ್ ಗನ್ ಮೌಂಟ್ ಮಾಡಲಾದ ಈ ವಾಹನವು ವಿಮಾನ ನಿಲ್ದಾಣಕ್ಕೆ ಹೆಚ್ಚಿನ ಭದ್ರತೆ ಒದಗಿಸಲಿದೆ ಎಂದು ವಿಮಾನ ನಿಲ್ದಾಣದ ಪ್ರಕಟನೆ ತಿಳಿಸಿದೆ.

Gayathri SG

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

36 mins ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

58 mins ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

1 hour ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

2 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

2 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

2 hours ago