ಬೇಲೂರು: ಮಾ.೧೦-ಪಂಚರತ್ನ ರಥ ಯಾತ್ರೆ ಮೂಲಕ ಬೇಲೂರು ವಿಧಾನಸಭಾ ಕ್ಷೇತ್ರವನ್ನು ಪ್ರವೇಶಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರವರು ಇಂದು ಪುಷ್ಪಗಿರಿ ಮಹಾಸಂಸ್ಥಾನದ ಮಠಕ್ಕೆ ಭೇಟಿ ನೀಡುವ ಮೂಲಕ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಸೋಮಶೇಖರ ಶಿವಾಚಾರ್ಯ ಮಹಾಸ್ವಾಮಿಗಳ ಆಶೀರ್ವಾದ ಪಡೆದರು.
ಕಳೆದ ದಿನದಿಂದ ಬೇಲೂರು ವಿಧಾನಸಭಾ ಕ್ಷೇತ್ರದ ಸಂಚರಿಸುತ್ತಿರುವ ಪಂಚರತ್ನ ರಥ ಯಾತ್ರೆ ಹಳೇಬೀಡು ಹೋಬಳಿಯ ಸಾಣೇನಹಳ್ಳಿ ಗ್ರಾಮದಲ್ಲಿ ವ್ಯಾಸ್ತವ್ಯ ಮಾಡಿದ್ದು, ಇಂದು ನೇರ ಹಳೇಬೀಡು ಸಿದ್ದಾಪುರ ಗ್ರಾಮದಿಂದ ಪುಷ್ಪಗಿರಿ ಮಠಕ್ಕೆ ಭೇಟಿ ನೀಡಿದರು. ಪುಷ್ಪಗಿರಿ ಮಠದಲ್ಲಿ ಅತ್ಯಾಧುನಿಕವಾಗಿ ನಿರ್ಮಿಸಿದ ಕಲಾಭವನದಲ್ಲಿ ಸರಳ ಕಾರ್ಯಕ್ರಮದಲ್ಲಿ ಪೂಜ್ಯರು ಮಾಜಿ ಮುಖ್ಯಮಂತ್ರಿಗಳಿಗೆ, ವಿಧಾನ ಪರಿಷತ್ ಸದಸ್ಯ ಭೋಜೇಗೌಡ, ಹಾಸನ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ಮತ್ತು ಸ್ಥಳೀಯ ಶಾಸಕರಾದ ಕೆ.ಎಸ್.ಲಿಂಗೇಶ್ ಒಳಗೊಂಡ ಮುಖಂಡರಿಗೆ ಆಶೀರ್ವಾದವನ್ನು ಮಾಡಿದರು.
ಬಳಿಕ ಮಾತನಾಡಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರವರು ಪುಷ್ಪಗಿರಿ ಮಠದ ಸರ್ವತೋಮುಖ ಅಭಿವೃದ್ದಿ ನಿಜಕ್ಕೂ ಸಂತೋಷ ತಂದಿದೆ. ಕಿರಿಯ ವಯಸ್ಸಿನಲ್ಲೇ ಇಲ್ಲಿನ ಜಗದ್ಗುರುಗಳ ಕೈಗೊಂಡ ಕೆಲಸ ಮಾದರಿಯಾಗಿದ್ದು, ಸ್ವಾಮೀಜಿಗಳು ನಡೆಸಿದ ನೀರಾವರಿ ಹೋರಾಟ ಎಂದಿಗೂ ಮರೆಯುತ್ತಿಲ್ಲ, ಅವರ ದಿಟ್ಟತನ ಮತ್ತು ವ್ಯಕ್ತಿತ್ವ ಇಡೀ ಸಮಾಜ ಅನುಸರಿಸಬೇಕಿದೆ. ಇಲ್ಲಿನ ಅತ್ಯಾಧುನಿಕ ಕಲಾ ಭವನ ಇಡೀ ಜಿಲ್ಲೆಯಲ್ಲಿ ಮಾದರಿಯಾಗಿದೆ. ರಾಜ್ಯಾದ್ಯಂತ ನಡೆಯುತ್ತಿರುವ ಪಂಚರತ್ನ ರಥ ಯಾತ್ರೆಗೆ ಸ್ವಾಮೀಜಿಗಳಿಂದ ಪೂರ್ಣಾಶೀರ್ವಾದ ಪಡೆಯಲಾಗಿದೆ ಮುಂದಿನ ಬಾರಿ ಮತ್ತೊಮ್ಮೆ ಬರುವ ತಿಳಿಸಿ ಅಲ್ಲಿಂದ ಮಲ್ಲಾಪುರ ಮತ್ತು ಹಗರೆ ಕಡೆ ಪ್ರಯಾಣ ಬೆಳೆಸಿದರು.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…